ನನ್ನ ಕಾದಂಬರಿಗಳಿಗೆ ಶುದ್ಧ ವಿಮರ್ಶೆ ಬಂದಿಲ್ಲ : ಬೈರಪ್ಪ

ಹೊಸ ಕಾದಂಬರಿ ಕವಲು ಮಾರುಕಟ್ಟೆಯಲ್ಲಿ ಬಿಸಿಬಿಸಿದೋಸೆಯಂತೆ ಖರ್ಚಾಗುತ್ತಿವೆ. ಕಳೆದ ಜೂನ್ 28 ರಂದು ಬಿಡುಗಡೆಗೊಂಡಿರುವ ಕವಲು ಕಾದಂಬರಿ ಮೂರೇ ದಿನದಲ್ಲಿ ಮೂರು ಮುದ್ರಣ ಕಂಡಿದ್ದು, ಜುಲೈ 2 ಕ್ಕೆ ನಾಲ್ಕನೇ ಮುದ್ರಣ ಮಾರುಕಟ್ಟೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಖುಷಿಯಲ್ಲಿರುವ ಭೈರಪ್ಪ ಪತ್ರಿಕೆಯೊಂದಕ್ಕೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ನನ್ನ ಕಾದಂಬರಿಗಳಿಗೆ ಉತ್ತಮ ವಿಮರ್ಶೆಗಳು ಬಂದಿಲ್ಲ. ಹೊಗಳುವವರು, ತೆಗಳುವವರು ಯಾರೂ ಕೂಡಾ ಸರಿಯಾಗಿ ವಿಮರ್ಶೆ ಮಾಡಲಿಲ್ಲ. ನನ್ನ ತಾಂತ್ರಿಕ ಕೌಶಲವನ್ನು ಗುರುತಿಸಲಿಲ್ಲ ಎಂದರು. ಭಾರತದಲ್ಲಿ ಈಗ ಮನುಶಾಸ್ತ್ರ ಚಾಲ್ತಿಯಲ್ಲಿಲ್ಲ. ಆದರೆ, ಮುಸ್ಲಿಂ ಧರ್ಮ ಗ್ರಂಥ ಮಾತ್ರ ಈಗಲೂ ಹಿಂಸೆಯನ್ನು ಪ್ರಚೋದಿಸುತ್ತದೆ. ಅದನ್ನು ಬದಲಾಯಿಸಿಕೊಳ್ಳಲು ಅವರು ಬಯಸುವುದಿಲ್ಲ. ಅದನ್ನು ಬದಲಾಯಿಸಿ ಎಂದು ಹೇಳುವ ನಾಯಕರೂ ಇಲ್ಲ. ಬದಲಾಯಿಸಲು ನಮ್ಮ ರಾಜಕೀಯ ನಾಯಕರು ಬಿಡುವುದಿಲ್ಲ ಎಂದು ಭೈರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಇಡೀ ಭಾರತೀಯ ಕುಟುಂಬದಲ್ಲಿ ಆಗುತ್ತಿರುವ ಬದಲಾವಣೆಗಳು, ತಲ್ಲಣಗಳೇ ಕವಲು ಕಾದಂಬರಿಯ ಮುಖ್ಯ ಆಶಯ. ಕುಟುಂಬ ವ್ಯವಸ್ಥೆಯ ಬಗ್ಗೆ ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಕೃತಿಗಳು ಬಂದಿವೆ. ನಾನು ಹೊಸ ದೃಷ್ಟಿಕೋನದಿಂದ ನೋಡಿದ್ದೇನೆ. ವರದಕ್ಷಿಣೆ ಕಾನೂನು, ಕೌಟುಂಬಿಕ ಹಿಂಸೆ ನಿಯಂತ್ರಣ ಕಾನೂನುಗಳು ಹೇಗೆ ದುರ್ಬಳಿಕೆಯಾಗುತ್ತಿವೆ ಎಂದು ವಿವರಿಸಿದ್ದೇನೆ. ಇದರಿಂದ ಉಂಟಾಗುವ ಸಾಮಾಜಿಕ, ನೈತಿಕ ಪರಿಣಾಮಗಳು, ಮುಂದಿನ ಪೀಳಿಗೆಯ ಮೇಲೆ ಆಗುವ ಪರಿಣಾಮಗಳು ಬಗ್ಗೆ ಕಾದಂಬರಿಯಲ್ಲಿ ಚರ್ಚಿಸಿದ್ದೇನೆ ಎಂದು ಭೈರಪ್ಪ ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications