ನನ್ನ ಕಾದಂಬರಿಗಳಿಗೆ ಶುದ್ಧ ವಿಮರ್ಶೆ ಬಂದಿಲ್ಲ : ಬೈರಪ್ಪ

ಹೊಸ ಕಾದಂಬರಿ ಕವಲು ಮಾರುಕಟ್ಟೆಯಲ್ಲಿ ಬಿಸಿಬಿಸಿದೋಸೆಯಂತೆ ಖರ್ಚಾಗುತ್ತಿವೆ. ಕಳೆದ ಜೂನ್ 28 ರಂದು ಬಿಡುಗಡೆಗೊಂಡಿರುವ ಕವಲು ಕಾದಂಬರಿ ಮೂರೇ ದಿನದಲ್ಲಿ ಮೂರು ಮುದ್ರಣ ಕಂಡಿದ್ದು, ಜುಲೈ 2 ಕ್ಕೆ ನಾಲ್ಕನೇ ಮುದ್ರಣ ಮಾರುಕಟ್ಟೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಖುಷಿಯಲ್ಲಿರುವ ಭೈರಪ್ಪ ಪತ್ರಿಕೆಯೊಂದಕ್ಕೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ನನ್ನ ಕಾದಂಬರಿಗಳಿಗೆ ಉತ್ತಮ ವಿಮರ್ಶೆಗಳು ಬಂದಿಲ್ಲ. ಹೊಗಳುವವರು, ತೆಗಳುವವರು ಯಾರೂ ಕೂಡಾ ಸರಿಯಾಗಿ ವಿಮರ್ಶೆ ಮಾಡಲಿಲ್ಲ. ನನ್ನ ತಾಂತ್ರಿಕ ಕೌಶಲವನ್ನು ಗುರುತಿಸಲಿಲ್ಲ ಎಂದರು. ಭಾರತದಲ್ಲಿ ಈಗ ಮನುಶಾಸ್ತ್ರ ಚಾಲ್ತಿಯಲ್ಲಿಲ್ಲ. ಆದರೆ, ಮುಸ್ಲಿಂ ಧರ್ಮ ಗ್ರಂಥ ಮಾತ್ರ ಈಗಲೂ ಹಿಂಸೆಯನ್ನು ಪ್ರಚೋದಿಸುತ್ತದೆ. ಅದನ್ನು ಬದಲಾಯಿಸಿಕೊಳ್ಳಲು ಅವರು ಬಯಸುವುದಿಲ್ಲ. ಅದನ್ನು ಬದಲಾಯಿಸಿ ಎಂದು ಹೇಳುವ ನಾಯಕರೂ ಇಲ್ಲ. ಬದಲಾಯಿಸಲು ನಮ್ಮ ರಾಜಕೀಯ ನಾಯಕರು ಬಿಡುವುದಿಲ್ಲ ಎಂದು ಭೈರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಇಡೀ ಭಾರತೀಯ ಕುಟುಂಬದಲ್ಲಿ ಆಗುತ್ತಿರುವ ಬದಲಾವಣೆಗಳು, ತಲ್ಲಣಗಳೇ ಕವಲು ಕಾದಂಬರಿಯ ಮುಖ್ಯ ಆಶಯ. ಕುಟುಂಬ ವ್ಯವಸ್ಥೆಯ ಬಗ್ಗೆ ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಕೃತಿಗಳು ಬಂದಿವೆ. ನಾನು ಹೊಸ ದೃಷ್ಟಿಕೋನದಿಂದ ನೋಡಿದ್ದೇನೆ. ವರದಕ್ಷಿಣೆ ಕಾನೂನು, ಕೌಟುಂಬಿಕ ಹಿಂಸೆ ನಿಯಂತ್ರಣ ಕಾನೂನುಗಳು ಹೇಗೆ ದುರ್ಬಳಿಕೆಯಾಗುತ್ತಿವೆ ಎಂದು ವಿವರಿಸಿದ್ದೇನೆ. ಇದರಿಂದ ಉಂಟಾಗುವ ಸಾಮಾಜಿಕ, ನೈತಿಕ ಪರಿಣಾಮಗಳು, ಮುಂದಿನ ಪೀಳಿಗೆಯ ಮೇಲೆ ಆಗುವ ಪರಿಣಾಮಗಳು ಬಗ್ಗೆ ಕಾದಂಬರಿಯಲ್ಲಿ ಚರ್ಚಿಸಿದ್ದೇನೆ ಎಂದು ಭೈರಪ್ಪ ಹೇಳಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications