ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಡವರಿಗೆ ಆರೋಗ್ಯಶ್ರೀ ವರದಾನ: ಶ್ರೀರಾಮುಲು
402 ವಿವಿಧ ಅಘಾತಕಾರಿ ಕಾಯಿಲೆಗಳಿಗೆ ಅಂದರೆ, ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ತೊಂದರೆ, ಸುಟ್ಟಗಾಯ ಇತ್ಯಾದಿಗಳಿಗೆ ಉಚಿತ ವೈದ್ಯಕೀಯ ಸೌಲಭ್ಯ ಪಡೆಯುವ ಅವಕಾಶ ಒದಗಿಸಲಾಗಿದೆ.
ರಾಜ್ಯದಲ್ಲಿ ಪ್ರಸಕ್ತ ಗುಲ್ಬರ್ಗಾ ಕಂದಾಯ ವಿಭಾಗದ 6 ಜಿಲ್ಲೆಗಳಾದ ಬೀದರ್, ಗುಲ್ಬರ್ಗಾ, ಯಾದಗಿರ್, ರಾಯಚೂರು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 31/07/2007ರಿಂದ ಜಾರಿಗೊಂಡಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಿಳಿಸಿದರು.
ಸಚಿವರು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸುತ್ತಾ ಈ ಯೋಜನೆಯನ್ನು ಹೈದರಾಬಾದ್ - ಕರ್ನಾಟಕ ದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಸಾಧಕ ಬಾಧಕಗಳನ್ನು ನೋಡಿಕೊಂಡು ಇಡೀ ರಾಜ್ಯಕ್ಕೆ ಯೋಜನೆಯನ್ನು ವಿಸ್ತರಿಸುವ ಯೋಜನೆ ಇದೆ ಎಂದು ಸಚಿವರು ವಿಧಾನಸಭಾ ಸದಸ್ಯ ಹ್ಯಾರಿಸ್ ಎನ್ ಎ ಅವರ ಪ್ರಶ್ನೆಗೆ ಉತ್ತರಿಸುತ್ತಾ ತಿಳಿಸಿದರು.
Story first published: Friday, July 2, 2010, 9:53 [IST]