ಬೆಂಕಿಗೆ ಲಕ್ಷಾಂತರ ಬೆಲೆಯ ಶೇಂಗಾ ಆಹುತಿ

ಈ ಘಟನೆಯಲ್ಲಿ ಕಟ್ಟಡದಲ್ಲಿ ರಾಶಿ ಹಾಕಲಾಗಿದ್ದ 42 ರಿಂದ 45 ಲಕ್ಷ ರೂ ಮೌಲ್ಯದ ಅಂದಾಜು 800 ಕ್ವಿಂಟಾಲ್ ಶೇಂಗಾ ಕಾಳು ಹಾಗೂ ಅಂದಾಜು 20 ಲಕ್ಷ ರೂ ಮೌಲ್ಯದ ಕಟ್ಟಡ ಹಾಗೂ ಸಂಸ್ಕರಣಾ ಯಂತ್ರೋಪಕರಣ ಹಾನಿಗೆ ಒಳಗಾಗಿದೆ.
ಈ ಬೆಂಕಿ ಆಕಸ್ಮಿಕದಲ್ಲಿ ಸಂಸ್ಕರಣೆಗೊಂಡು ರಾಶಿ ಹಾಕಲಾಗಿದ್ದ 750 ಕ್ವಿಂಟಾಲ್ ಶೇಂಗಾ ಬೀಜ ಹಾಗೂ ಸಂಸ್ಕರಣೆಗೊಳ್ಳಬೇಕಿದ್ದ 105 ಕ್ವಿಂಟಾಲ್ ಶೇಂಗಾ ಕಾಯಿಗಳು ಅಗ್ನಿಗೆ ಆಹುತಿಯಾಗಿದೆ. ಸಂಸ್ಕರಣಾ ಘಟಕದ ಕಟ್ಟಡ ಹಾಗೂ ಯಂತ್ರೋಪಕರಣಗಳೂ ತೀವೃ ಸ್ವರೂಪದಲ್ಲಿ ಹಾನಿಗೀಡಾಗಿದ್ದು, ಒಟ್ಟು 65 ಲಕ್ಷ ರುಪಾಯಿಗಳ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಶೇಂಗಾ ಕಾಳು ಹಾಗೂ ಸಿಪ್ಪೆಯನ್ನು ಬೇರ್ಪಡಿಸುವ ಈ ಸಂಸ್ಕರಣಾ ಘಟಕದಲ್ಲಿ ರೈತರಿಂದ ಖರೀದಿಸಲಾಗಿದ್ದ 800 ಕ್ವಿಂಟಾಲ್ ಗೂ ಅಧಿಕ ಪ್ರಮಾಣದ ಶೇಂಗಾ ಕಾಳನ್ನು ಸಂಗ್ರಹಿಸಲಾಗಿತ್ತು. ಗುರುವಾರ ನಡುರಾತ್ರಿಯವರೆಗೂ ಶೇಂಗಾಕಾಯಿಯನ್ನು ಸಂಸ್ಕರಣೆಗೊಳಿಸಿ, ಕಾಳು ಬೇರ್ಪಡಿಸಲಾಗಿತ್ತು. ಕಟ್ಟಡದ ಒಳಭಾಗದಲ್ಲಿಯೇ ರಾಶಿ ಹಾಕಲಾಗಿದ್ದ ಶೇಂಗಾ ಕಾಳುಗಳು ಬೆಳಗಿನ ಜಾವ 4 ರ ಸುಮಾರಿಗೆ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ನಸುಕಿನ ಜಾವ 4 ಗಂಟೆಯ ವೇಳೆಗೆ ನಗರದಲ್ಲಿ ಹೈವೋಲ್ಟೇಜ್ ವಿದ್ಯುತ್ ಪೂರೈಕೆಯಾಗ್ದಿದು, ಈ ಸಂದರ್ಭದಲ್ಲಿ ಕಟ್ಟಡದ ಹೊರಭಾಗದಲ್ಲಿನ ವಿದ್ಯುತ್ ಪರಿವರ್ತಕದಲ್ಲಿಯೂ ಬೆಂಕಿಯ ಕಿಡಿಗಳು ಹಾರಿದ್ದವು. ಕಟ್ಟಡದ ಒಳಭಾಗದಲ್ಲಿ ವಿದ್ಯುತ್ ಶಾಟ್ಸರ್ಕ್ಯೂಟ್ ಸಂಭವಿಸಿದೆ. ಅಲ್ಲಿ ಹಾಕಲಾಗಿದ್ದ 15 ವ್ಯಾಟ್ ಬಲ್ಬ ಒಡೆದು ಬೆಂಕಿ ಅನಾಹುತ ಸಂಭವಿಸಿದೆ ಎಂದು ಸಂಸ್ಕರಣಾ ಘಟಕದ ಮಾಲೀಕ ನಂದೀಶ್ವರಯ್ಯ ಕಂಬಾಳಿಮಠ ತಿಳಿಸಿದ್ದಾರೆ.
ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಶಿಗ್ಗಾಂವ ನಗರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಿತು. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications