ಬೆಂಕಿಗೆ ಲಕ್ಷಾಂತರ ಬೆಲೆಯ ಶೇಂಗಾ ಆಹುತಿ

ಈ ಘಟನೆಯಲ್ಲಿ ಕಟ್ಟಡದಲ್ಲಿ ರಾಶಿ ಹಾಕಲಾಗಿದ್ದ 42 ರಿಂದ 45 ಲಕ್ಷ ರೂ ಮೌಲ್ಯದ ಅಂದಾಜು 800 ಕ್ವಿಂಟಾಲ್ ಶೇಂಗಾ ಕಾಳು ಹಾಗೂ ಅಂದಾಜು 20 ಲಕ್ಷ ರೂ ಮೌಲ್ಯದ ಕಟ್ಟಡ ಹಾಗೂ ಸಂಸ್ಕರಣಾ ಯಂತ್ರೋಪಕರಣ ಹಾನಿಗೆ ಒಳಗಾಗಿದೆ.
ಈ ಬೆಂಕಿ ಆಕಸ್ಮಿಕದಲ್ಲಿ ಸಂಸ್ಕರಣೆಗೊಂಡು ರಾಶಿ ಹಾಕಲಾಗಿದ್ದ 750 ಕ್ವಿಂಟಾಲ್ ಶೇಂಗಾ ಬೀಜ ಹಾಗೂ ಸಂಸ್ಕರಣೆಗೊಳ್ಳಬೇಕಿದ್ದ 105 ಕ್ವಿಂಟಾಲ್ ಶೇಂಗಾ ಕಾಯಿಗಳು ಅಗ್ನಿಗೆ ಆಹುತಿಯಾಗಿದೆ. ಸಂಸ್ಕರಣಾ ಘಟಕದ ಕಟ್ಟಡ ಹಾಗೂ ಯಂತ್ರೋಪಕರಣಗಳೂ ತೀವೃ ಸ್ವರೂಪದಲ್ಲಿ ಹಾನಿಗೀಡಾಗಿದ್ದು, ಒಟ್ಟು 65 ಲಕ್ಷ ರುಪಾಯಿಗಳ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಶೇಂಗಾ ಕಾಳು ಹಾಗೂ ಸಿಪ್ಪೆಯನ್ನು ಬೇರ್ಪಡಿಸುವ ಈ ಸಂಸ್ಕರಣಾ ಘಟಕದಲ್ಲಿ ರೈತರಿಂದ ಖರೀದಿಸಲಾಗಿದ್ದ 800 ಕ್ವಿಂಟಾಲ್ ಗೂ ಅಧಿಕ ಪ್ರಮಾಣದ ಶೇಂಗಾ ಕಾಳನ್ನು ಸಂಗ್ರಹಿಸಲಾಗಿತ್ತು. ಗುರುವಾರ ನಡುರಾತ್ರಿಯವರೆಗೂ ಶೇಂಗಾಕಾಯಿಯನ್ನು ಸಂಸ್ಕರಣೆಗೊಳಿಸಿ, ಕಾಳು ಬೇರ್ಪಡಿಸಲಾಗಿತ್ತು. ಕಟ್ಟಡದ ಒಳಭಾಗದಲ್ಲಿಯೇ ರಾಶಿ ಹಾಕಲಾಗಿದ್ದ ಶೇಂಗಾ ಕಾಳುಗಳು ಬೆಳಗಿನ ಜಾವ 4 ರ ಸುಮಾರಿಗೆ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ನಸುಕಿನ ಜಾವ 4 ಗಂಟೆಯ ವೇಳೆಗೆ ನಗರದಲ್ಲಿ ಹೈವೋಲ್ಟೇಜ್ ವಿದ್ಯುತ್ ಪೂರೈಕೆಯಾಗ್ದಿದು, ಈ ಸಂದರ್ಭದಲ್ಲಿ ಕಟ್ಟಡದ ಹೊರಭಾಗದಲ್ಲಿನ ವಿದ್ಯುತ್ ಪರಿವರ್ತಕದಲ್ಲಿಯೂ ಬೆಂಕಿಯ ಕಿಡಿಗಳು ಹಾರಿದ್ದವು. ಕಟ್ಟಡದ ಒಳಭಾಗದಲ್ಲಿ ವಿದ್ಯುತ್ ಶಾಟ್ಸರ್ಕ್ಯೂಟ್ ಸಂಭವಿಸಿದೆ. ಅಲ್ಲಿ ಹಾಕಲಾಗಿದ್ದ 15 ವ್ಯಾಟ್ ಬಲ್ಬ ಒಡೆದು ಬೆಂಕಿ ಅನಾಹುತ ಸಂಭವಿಸಿದೆ ಎಂದು ಸಂಸ್ಕರಣಾ ಘಟಕದ ಮಾಲೀಕ ನಂದೀಶ್ವರಯ್ಯ ಕಂಬಾಳಿಮಠ ತಿಳಿಸಿದ್ದಾರೆ.
ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಶಿಗ್ಗಾಂವ ನಗರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಿತು. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications