50 ಕೋಟಿ ಪರಿಹಾರ ಕೋರಿ ಅಗ್ನಿಗೆ ನೋಟೀಸ್

ಆರ್ಟ್ ಆಫ್ ಲಿವಿಂಗ್ ಆಶ್ರಮದ ಪರ ವಕಾಲತ್ತು ವಹಿಸಿರುವ ವಕೀಲ ದೊರೈರಾಜು ಅವರು ಶ್ರೀಧರ್ ಅವರಿಗೆ ನೋಟೀಸ್ ಕಳಿಸಿದ್ದಾರೆ. ನೋಟೀಸ್ ಬಂದಿರುವುದನ್ನು 'ಅಗ್ನಿ' ಶ್ರೀಧರ್ ದೃಢಪಡಿಸಿದ್ದು, ತಕ್ಕ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಕೆಲ ಕಾಲಗಳಿಂದ ಅಗ್ನಿ ಪತ್ರಿಕೆ ಮತ್ತು ಆರ್ಟ್ ಆಫ್ ಲಿವಿಂಗ್ ನಡುವೆ ನಡೆಯುತ್ತಿರುವ ಜಟಾಪಟಿ ಈಗ ನ್ಯಾಯಾಲಯದ ಮೆಟ್ಟಲೇರುವ ಹಂತ ತಲುಪಿದೆ. ಆರ್ಟ್ ಆಫ್ ಲಿವಿಂಗ್ ನ ಸ್ವಾಮೀಜಿ ಶ್ರೀಶ್ರೀ ರವಿಶಂಕರ್ ಗುರೂಜಿ ಭೂಗಳ್ಳತನ ಮಾಡಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದರು. ಶ್ರೀಧರ್ ತಮಗೆ ಫೋನ್ ಮಾಡಿ ಬೆದರಿಕೆ ಒಡ್ಡಿದ್ದರು. ತಮ್ಮಲ್ಲಿ ದಾಖಲೆಗಳಿದ್ದು ಕೇಳಿದಷ್ಟು ಹಣ ನೀಡದಿದ್ದರೆ ಎಲ್ಲ ಬಹಿರಂಗಪಡಿಸುವುದಾಗಿ ಹೆದರಿಸುತ್ತಿದ್ದಾರೆ ಎಂದು ಗುರೂಜಿ ಆರೋಪಿಸಿದ್ದರು.
ನೋಟೀಸಿನಲ್ಲಿ ತಮ್ಮ ವಿರುದ್ಧ ಕಳೆದ ಏಳು ವರ್ಷಗಳಿಂದ ಮಾಡಲಾಗಿರುವ ಎಲ್ಲ ಆರೋಪಗಳಿಗೆ ಆಡಿಯೋ ಅಥವಾ ವಿಡಿಯೋ ಸಾಕ್ಷ್ಯಗಳನ್ನ ಒದಗಿಸಬೇಕು. ಅಥವಾ ಮುಖಪುಟದಲ್ಲಿ ತಪ್ಪು ಒಪ್ಪಿಕೊಂಡು ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ 50 ಕೋಟಿ ರು. ಪರಿಹಾರ ಕೋರಿ ದಾವೆ ಹೂಡುವುದಾಗಿ ಆರ್ಟ್ ಆಫ್ ಲಿವಿಂಗ್ ನೀಡಿರುವ ನೋಟೀಸಿನಲ್ಲಿ ತಿಳಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications