ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವುಗಳು ಹಿಂದು ಧರ್ಮದ ಸಂಕೇತ : ಚಿಮೂ

By Mrutyunjaya Kalmat
|
Google Oneindia Kannada News

M Chidanandamurthy
ಬೆಂಗಳೂರು, ಜು. 4 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುವುದು ಕೋಮುವಾದ ಎಂದು ಸಾಹಿತಿ ಯು ಆರ್ ಅನಂತಮೂರ್ತಿ ಎಂದು ಹೇಳಿದ್ದಾರೆ. ಮಹಾತ್ಮಗಾಂಧಿ ಎಲ್ಲಿಯವರೆಗೆ ಗೋವುಗಳು ಇರುತ್ತವೋ ಅಲ್ಲಿಯವರೆಗೆ ಹಿಂದು ಧರ್ಮ ಇರುತ್ತದೆ ಎಂದು ಹೇಳಿದ್ದಾರೆ. ಹಾಗಾದರೆ ಮಹಾತ್ಮಗಾಂಧಿ ಕೋಮುವಾದಿಯೇ ಎಂದು ಪ್ರಶ್ನಿಸುತ್ತಾರೆ ಹಿರಿಯ ಸಂಶೋಧಕ ಡಾ ಎಂ ಚಿದಾನಂದಮೂರ್ತಿ.

ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ಶುಕ್ರವಾರ ಆದಿಚುಂಚನಗಿರಿ ಮಠದಲ್ಲಿ ಚಾಲನೆ ಗೋವಂಶ ರಕ್ಷಾ ಸಂದೇಶ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಗೋಹತ್ಯೆ ನಿಷೇಧ ಕಾನೂನಿಗೆ ಅನಂತಮೂರ್ತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ 48ನೇ ವಿಧಿಯಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಮಾಡಬೇಕು ಎಂದು ಹೇಳಿದೆ. ಗುಜರಾತ್ ಗೋಹತ್ಯೆ ನಿಷೇಧ ಮಾಡಿದಾಗ ಸುಪ್ರಿಂಕೋರ್ಟ್ ನ ಏಳು ನ್ಯಾಯಮೂರ್ತಿಗಳ ಪೀಠ ಅದನ್ನು ಬೆಂಬಲಿಸಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಬೇಕು ಎಂದು ಆದಿಚುಂಚನಗಿರಿ ಸ್ವಾಮೀಜಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಕೋಲಾರದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವವರನ್ನು ಮರಳಿ ಹಿಂದು ಧರ್ಮಕ್ಕೆ ಕರೆತರುವಲ್ಲಿ ಕೆಲ ಮಟ್ಟಿಗೆ ಯಶಸ್ಸು ಗಳಿಸಿದ್ದಾರೆ. ಅವರು ಪೂರ್ಣ ಮಟ್ಟದಲ್ಲಿ ಈ ಕೆಲಸ ಮಾಡಬೇಕು ಎಂದು ಚಿಮೂ ಅವರಿಗೆ ಮನವಿ ಮಾಡಿಕೊಂಡರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X