ಹರಿಪ್ರಸಾದ 'ಕೈ'ಗೆ ಕೆಪಿಸಿಸಿ ಕೀಲಿ?

Congress logo
ಬೆಂಗಳೂರು, ಜು. 4 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ ಅವರು ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ನೆರೆ ಹಣ ದುರ್ಬಳಿಕೆ ಆರೋಪ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರ ಕೆಳಗಿಳಿಸುವುದು ಖಚಿತವಾಗಿದ್ದು, ಆ ಸ್ಥಾನಕ್ಕೆ ಹರಿಪ್ರಸಾದ ಅವರನ್ನು ನೇಮಿಸಲು ದಿಲ್ಲಿ ವರಿಷ್ಠರು ಚಿಂತನೆ ನಡೆಸಿದ್ದಾರೆ.

ನಾಯಕತ್ವ ಕೊರತೆ, ಜೆಡಿಎಸ್ ಜೊತೆ ಮೈತ್ರಿ ಹೊಂದಾಣಿಕೆಯ ಗೊಂದಲ, ನೆರೆ ಹಣ ದುರ್ಬಳಿಕೆ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಂಪೂರ್ಣ ಕುಸಿದಿದೆ. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಹರಿಪ್ರಸಾದ ಅವರನ್ನು ರಾಜ್ಯಕ್ಕೆ ಕಳಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯ ಸಭೆಗೆ ನಡೆದ ಚುನಾವಣೆಯಲ್ಲಿ ಹರಿಪ್ರಸಾದ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ, ಈ ನಿರ್ಧಾರಕ್ಕೆ ಜೆಡಿಎಸ್ ನಿಂದ ಬಲವಾದ ವಿರೋಧ ವ್ಯಕ್ತವಾಗಿತ್ತು. ಈ ವಿರೋಧವೇ ಹರಪ್ರಸಾದ ಅವರಿಗೆ ವರದಾನವಾಗುವ ಸಾಧ್ಯತೆ ಇದೆ. ಜೆಡಿಎಸ್ ಬಗ್ಗೆ ಮೃದುಧೋರಣೆ ತಾಳಲಾರದೆ ಪಕ್ಷವನ್ನು ಕಟ್ಟುವ ಸಮರ್ಥ ನಾಯಕನನ್ನು ಕಾಂಗ್ರೆಸ್ ಹುಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+