ರಾಮಮಂದಿರಕ್ಕೆ ವಿರೋಧಿಸುವವರು ಪಾಪಿಗಳು

ಸಂಸ್ಕೃತ ಪ್ರತಿಷ್ಠಾನಂ ಏರ್ಪಡಿಸಿದ್ದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ತೊಗಾಡಿಯಾ, ರಾಮಮಂದಿರ ನಿರ್ಮಾಣಕ್ಕೆ ಮುಸಲ್ಮಾನರು ಕೂಡಾ ಸಹಕರಿಸಬೇಕೆಂದರು.
ರಾಮಮಂದಿರ ಈ ದೇಶದ ಸಮಸ್ತ ಜನರ ಒಂದು ಆಶಯ. ಇದು ಭಾರತೀಯರ ಭಾವನೆ ಕೂಡಾ. ಭಾರತೀಯರೆಲ್ಲರೂ ಈ ವಿಚಾರದಲ್ಲಿ ಒಮ್ಮತದಿಂದ ರಾಮಮಂದಿರ ನಿರ್ಮಾಣಕ್ಕೆ ಧನಿಗೂಡಿಸಬೇಕಿದೆ. ರಾಮಮಂದಿರ ನಿರ್ಮಾಣ ಆಗಬೇಕೆಂಬುದು ಈ ದೇಶದ ಪ್ರತಿಯೊಬ್ಬ ಭಾರತೀಯ ಬಯಸಿರುವುದು ಸಹಜ. ಈ ಭಾವನೆಗಳನ್ನು ದೇಶದ ಮುಸಲ್ಮಾನರೂ ಗೌರವಿಸಿ ಮಂದಿರ ನಿರ್ಮಾಣಕ್ಕೆ ಮುಂದಾಗಬೇಕಿದೆ.
ಈ ವಿಚಾರದಲ್ಲಿ ಯಾವ ಜಿಜ್ಞಾಸೆ- ಚಿಂತನ- ಮಂಥನಗಳ ಅಗತ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಬೇಡ ಎನ್ನುವವರು ಹಿಂದೂ ಧರ್ಮಿಯರೇ ಅಲ್ಲ. ಇಂತಹ ನಿಲುವು ತಾಳುವ ವ್ಯಕ್ತಿಗಳು ಜಿಹಾದಿಗಳಲ್ಲದೆ ಬೇರೇನೂ ಆಲ್ಲ ಎಂದು ತೊಗಾಡಿಯಾ ಗುಡುಗಿದರು.
ಸಂಶೋಧಕ ಡಾ. ಚಿದಾನಂದಮೂರ್ತಿ ಮಾತನಾಡಿ, ದೇಶದ ಹಲವಾರು ದೇವಾಲಯಗಳನ್ನು ಧ್ವಂಸಗೊಳಿಸಿ ಹಿಂದೂ ಧರ್ಮೀ ಯರ ಮೇಲೆ ಮುಸಲ್ಮಾನರು ದೌರ್ಜನ್ಯ ನಡೆಸಿರುವುದು ಕರಾಳ ಇತಿಹಾಸ ಎಂದು ಹೇಳಿದರು. ಪ್ರಪಂಚದ ಯಾವ ದೇಶದ ಚರಿತ್ರೆಯಲ್ಲಿಯೂ ಕಂಡರಿಯದ ರೀತಿಯಲ್ಲಿ ಸನಾತನ ಭಾರತೀಯ ಸಂಸ್ಕೃತಿ ಮೇಲೆ ದುರಾಕ್ರಮಣ ನಡೆದಿದೆ ಎಂದು ಅವರು ಪ್ರತಿಪಾದಿಸಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications