ಸವಣೂರು ನವಾಬರ ಬಂಗಲೆ ನವೀಕರಣ

ನವಾಬರ ಕಾಲದ ಸ್ಮಾರಕಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬ ಜನರ ಬಹುದಿನಗಳ ಬೇಡಿಕೆಗೆ ಮೊದಲ ಬಾರಿ ಸ್ಪಂದನೆ ದೊರೆತಿದ್ದು, ತಾಲೂಕ್ ಪಂಚಾಯ್ತಿಯ ಸದಸ್ಯರು ಹಾಗೂ ಅಧಿಕಾರಿಗಳ ವಿಶೇಷ ಆಸಕ್ತಿಯ ಫಲವಾಗಿ, ನವಾಬರ ಬಂಗಲೆ ಜೀವಂತಿಕೆಯನ್ನು ಪಡೆದುಕೊಳ್ಳುತ್ತಿದೆ.
ಐತಿಹಾಸಿಕ ಹಿನ್ನಲೆ ಹಾಗೂ ಕಲಾತ್ಮಕತೆಯನ್ನು ಹೊಂದಿರುವ ಹಲವಾರು ಕಟ್ಟಡಗಳು- ಕೋಟೆ ಬಾಗಿಲುಗಳು ಸವಣೂರಿನಲ್ಲಿದ್ದು, ಅವಸಾನದ ಅಂಚಿಗೆ ಸಾಗುತ್ತಿದೆ. ಇವುಗಳಲ್ಲಿ ಅತ್ಯಂತ ಪ್ರಮುಖವಾದ ನವಾಬರ ಬಂಗಲೆಯ ಸಂರಕ್ಷಣಾ ಕಾರ್ಯಕ್ಕೆ ತಾಲೂಕಾ ಪಂಚಾಯ್ತಿ ಮುಂದಾಗಿದ್ದು, ನೆಲಸಮಗೊಳ್ಳುವ ಹಂತದಲ್ಲಿದ್ದ ಕಟ್ಟಡಕ್ಕೆ ಪುನಶ್ಚೇತನ ನೀಡಿದೆ.
ಈ ಬಂಗಲೆಯ ನೆಲ ಮಹಡಿಯಲ್ಲಿ ತಾ.ಪಂ ಕಾರ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಕಟ್ಟಡದ ಮೇಲ್ಭಾಗದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸರಕಾರಿ ಡಿಗ್ರಿ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಟ್ಟಡವನ್ನು ಬಳಸಿಕೊಂಡರೆ ವಿನಃ ಅದರ ಸಮರ್ಪಕವಾದ ನಿರ್ವಹಣೆ ಕೈಗೊಳ್ಳಲಿಲ್ಲ ಎಂಬ ಅಸಮಾಧಾನವೂ ಸಾರ್ವಜನಿಕ ವಲಯದಲ್ಲಿದೆ.
ಕನಿಷ್ಠ ಪ್ರಮಾಣದ ನಿರ್ವಹಣೆಯೂ ಇಲ್ಲದೆ ನವಾಬರ ಬಂಗಲೆಯ ಮೊದಲನೆ ಮಹಡಿ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿತ್ತು. ನಿಧಾನವಾಗಿ ಅವಸಾನದ ಕಡೆಗೆ ಮುಖ ಮಾಡಿತು. ಅತ್ಯಂತ ವಿಶಾಲವಾದ ನವಾಬರ ಬಂಗಲೆಯ ಮೊದಲನೆ ಮಹಡಿ ಇತ್ತಿಚಿನ ವರ್ಷಗಳಲ್ಲಿ ಯಾವುದೇ ಕಾರ್ಯಕ್ಕೆ ಬಳಕೆ ಇಲ್ಲದೆ ಹಾಳುಕೊಂಪೆಯ ಸ್ವರೂಪ ಪಡೆದುಕೊಂಡಿತ್ತು.
ಹತ್ತಾರು ಬಗೆಯ ಪ್ರಾಣಿ ಪಕ್ಷಿಗಳಿಗೆ ಆವಾಸ ಸ್ಥಾನವಾಗಿದ್ದ ಮೊದಲನೆ ಮಹಡಿಯ ತುಂಬ ದುರ್ವಾಸನೆ ತುಂಬಿಕೊಂಡಿತ್ತು. ಶಿಥಿಲಾವಸ್ಥೆಯನ್ನು ತಲುಪಿದ ಕಟ್ಟಡ ಬಂದು ಭಾಗ ಕುಸಿತವನ್ನೂ ಕಂಡಿತ್ತು.
ಅಂತಿಮ ಹಂತದಲ್ಲಿ ಎಚ್ಚೆತ್ತುಕೊಂಡ ತಾಲೂಕ ಪಂಚಾಯ್ತಿಯ ಆಡಳಿತ ವರ್ಗ, 12 ನೇ ಹಣಕಾಸು ಯೋಜನೆಯ ಅಡಿ ಅಂದಾಜು 20 ಲಕ್ಷ ರುಗಳ ಆರಂಭಿಕ ವೆಚ್ಚದಲ್ಲಿ ನವಾಬರ ಬಂಗಲೆಯ ಮೊದಲ ಮಹಡಿಯ ಜೀರ್ಣೊದ್ಧಾರಕ್ಕೆ ಮುಂದಾಯಿತು. ಅತ್ಯಲ್ಪ ದಿನಗಳಲ್ಲಿಯೇ ಕಟ್ಟಡದ ಒಳಗಿನ ಸ್ವರೂಪವನ್ನೆ ಬದಲಾಯಿಸಲಾಗಿದ್ದು, ಕಟ್ಟಡ ತನ್ನ ಮೊದಲಿನ ಭವ್ಯತೆಯನ್ನು ಮರಳಿ ಪಡೆದುಕೊಂಡಿದೆ.
ಕುಸಿದಿರುವ ಕಟ್ಟಡದ ಹಿಂಭಾಗವನ್ನೂ ಪುನಃ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಇನ್ನೂ 20 ಲಕ್ಷ ರೂಗಳ ವೆಚ್ಚವಾಗಲಿದೆ. ವಿದ್ಯುತ್ ಸಂಪರ್ಕ ಸೇರಿದಂತೆ ಹಲವಾರು ಅಭಿವೃದ್ದಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications