ಸವಣೂರು ನವಾಬರ ಬಂಗಲೆ ನವೀಕರಣ

ನವಾಬರ ಕಾಲದ ಸ್ಮಾರಕಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬ ಜನರ ಬಹುದಿನಗಳ ಬೇಡಿಕೆಗೆ ಮೊದಲ ಬಾರಿ ಸ್ಪಂದನೆ ದೊರೆತಿದ್ದು, ತಾಲೂಕ್ ಪಂಚಾಯ್ತಿಯ ಸದಸ್ಯರು ಹಾಗೂ ಅಧಿಕಾರಿಗಳ ವಿಶೇಷ ಆಸಕ್ತಿಯ ಫಲವಾಗಿ, ನವಾಬರ ಬಂಗಲೆ ಜೀವಂತಿಕೆಯನ್ನು ಪಡೆದುಕೊಳ್ಳುತ್ತಿದೆ.
ಐತಿಹಾಸಿಕ ಹಿನ್ನಲೆ ಹಾಗೂ ಕಲಾತ್ಮಕತೆಯನ್ನು ಹೊಂದಿರುವ ಹಲವಾರು ಕಟ್ಟಡಗಳು- ಕೋಟೆ ಬಾಗಿಲುಗಳು ಸವಣೂರಿನಲ್ಲಿದ್ದು, ಅವಸಾನದ ಅಂಚಿಗೆ ಸಾಗುತ್ತಿದೆ. ಇವುಗಳಲ್ಲಿ ಅತ್ಯಂತ ಪ್ರಮುಖವಾದ ನವಾಬರ ಬಂಗಲೆಯ ಸಂರಕ್ಷಣಾ ಕಾರ್ಯಕ್ಕೆ ತಾಲೂಕಾ ಪಂಚಾಯ್ತಿ ಮುಂದಾಗಿದ್ದು, ನೆಲಸಮಗೊಳ್ಳುವ ಹಂತದಲ್ಲಿದ್ದ ಕಟ್ಟಡಕ್ಕೆ ಪುನಶ್ಚೇತನ ನೀಡಿದೆ.
ಈ ಬಂಗಲೆಯ ನೆಲ ಮಹಡಿಯಲ್ಲಿ ತಾ.ಪಂ ಕಾರ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಕಟ್ಟಡದ ಮೇಲ್ಭಾಗದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸರಕಾರಿ ಡಿಗ್ರಿ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಟ್ಟಡವನ್ನು ಬಳಸಿಕೊಂಡರೆ ವಿನಃ ಅದರ ಸಮರ್ಪಕವಾದ ನಿರ್ವಹಣೆ ಕೈಗೊಳ್ಳಲಿಲ್ಲ ಎಂಬ ಅಸಮಾಧಾನವೂ ಸಾರ್ವಜನಿಕ ವಲಯದಲ್ಲಿದೆ.
ಕನಿಷ್ಠ ಪ್ರಮಾಣದ ನಿರ್ವಹಣೆಯೂ ಇಲ್ಲದೆ ನವಾಬರ ಬಂಗಲೆಯ ಮೊದಲನೆ ಮಹಡಿ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿತ್ತು. ನಿಧಾನವಾಗಿ ಅವಸಾನದ ಕಡೆಗೆ ಮುಖ ಮಾಡಿತು. ಅತ್ಯಂತ ವಿಶಾಲವಾದ ನವಾಬರ ಬಂಗಲೆಯ ಮೊದಲನೆ ಮಹಡಿ ಇತ್ತಿಚಿನ ವರ್ಷಗಳಲ್ಲಿ ಯಾವುದೇ ಕಾರ್ಯಕ್ಕೆ ಬಳಕೆ ಇಲ್ಲದೆ ಹಾಳುಕೊಂಪೆಯ ಸ್ವರೂಪ ಪಡೆದುಕೊಂಡಿತ್ತು.
ಹತ್ತಾರು ಬಗೆಯ ಪ್ರಾಣಿ ಪಕ್ಷಿಗಳಿಗೆ ಆವಾಸ ಸ್ಥಾನವಾಗಿದ್ದ ಮೊದಲನೆ ಮಹಡಿಯ ತುಂಬ ದುರ್ವಾಸನೆ ತುಂಬಿಕೊಂಡಿತ್ತು. ಶಿಥಿಲಾವಸ್ಥೆಯನ್ನು ತಲುಪಿದ ಕಟ್ಟಡ ಬಂದು ಭಾಗ ಕುಸಿತವನ್ನೂ ಕಂಡಿತ್ತು.
ಅಂತಿಮ ಹಂತದಲ್ಲಿ ಎಚ್ಚೆತ್ತುಕೊಂಡ ತಾಲೂಕ ಪಂಚಾಯ್ತಿಯ ಆಡಳಿತ ವರ್ಗ, 12 ನೇ ಹಣಕಾಸು ಯೋಜನೆಯ ಅಡಿ ಅಂದಾಜು 20 ಲಕ್ಷ ರುಗಳ ಆರಂಭಿಕ ವೆಚ್ಚದಲ್ಲಿ ನವಾಬರ ಬಂಗಲೆಯ ಮೊದಲ ಮಹಡಿಯ ಜೀರ್ಣೊದ್ಧಾರಕ್ಕೆ ಮುಂದಾಯಿತು. ಅತ್ಯಲ್ಪ ದಿನಗಳಲ್ಲಿಯೇ ಕಟ್ಟಡದ ಒಳಗಿನ ಸ್ವರೂಪವನ್ನೆ ಬದಲಾಯಿಸಲಾಗಿದ್ದು, ಕಟ್ಟಡ ತನ್ನ ಮೊದಲಿನ ಭವ್ಯತೆಯನ್ನು ಮರಳಿ ಪಡೆದುಕೊಂಡಿದೆ.
ಕುಸಿದಿರುವ ಕಟ್ಟಡದ ಹಿಂಭಾಗವನ್ನೂ ಪುನಃ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಇನ್ನೂ 20 ಲಕ್ಷ ರೂಗಳ ವೆಚ್ಚವಾಗಲಿದೆ. ವಿದ್ಯುತ್ ಸಂಪರ್ಕ ಸೇರಿದಂತೆ ಹಲವಾರು ಅಭಿವೃದ್ದಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications