ಬಿಎಸ್ಸೆನ್ನೆಲ್ ಗೆ 3 ಜಿ ಉಚಿತ ತರಂಗಾಂತರ?

ತರಂಗಾಂತರವನ್ನು ಹಂಚಿಕೆ ಮಾಡಿದಾಗ ಬಿಡ್ ನಂತರ ಯಶಸ್ವಿ ಬಿಡ್ ದಾರ ಕಂಪೆನಿ ಪಾವತಿಸುವ ಮೊತ್ತವನ್ನು ನೀಡಬೇಕೆಂದು ಷರತ್ತನ್ನು ವಿಧಿಸಲಾಗಿದ್ದ ಮೇರೆಗೆ ಕಳೆದ ವಾರವಷ್ಟೇ ಎರಡೂ ಸಂಸ್ಥೆಗಳು ಸರ್ಕಾರಕ್ಕೆ 29,598 ಕೋಟಿ ರೂಪಾಯಿಗಳನ್ನು ಪಾವತಿಸಿವೆ.
ನಂತರ ದೂರಸಂಪರ್ಕ ಸಚಿವ ಏ ರಾಜಾ ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಹಣಕಾಸು ಸಚಿವ ಪ್ರಣಬ್ ಮುಕರ್ಜಿ ಅವರಿಗೆ ಬರೆದಿರುವ ಪತ್ರದಲ್ಲಿ ಏ ರಾಜಾ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದು ಈ ಎರಡೂ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯಿಂದ ಕೆಲಸ ಮಾಡುತ್ತಿಲ್ಲ, ಬದಲಿಗೆ ರಾಷ್ಟ್ರಾದ್ಯಂತ ಗ್ರಾಮೀಣ ಭಾಗದ ಜನತೆಗೆ ಉತ್ತಮ ಸೌಲಭ್ಯವನ್ನು ಕಲ್ಪಿಸಿಕೊಡುತ್ತಿವೆ ಎಂದು ಹೇಳಿದ್ದಾರೆ.
ಈ ಪಾವತಿಯಿಂದ ಎರಡೂ ಸಂಸ್ಥೆಗಳಿಗೆ ತೀವ್ರ ಹಣಕಾಸಿನ ಹೊರೆ ಆಗಿದೆ ಎಂದೂ ಅವರು ಹೇಳಿದ್ದಾರೆ. ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಬಿಎಸ್ ಎನ್ ಎಲ್ ಅದ್ಯಕ್ಷ ಕುಲ್ ದೀಪ್ ಗೋಯಲ್ ಅವರು ನಾವು ನಮ್ಮ ಇಚ್ಚೆಯಂತೆ ಬೇಕಾದ ವ್ರತ್ತಗಳಲ್ಲಿ ಹರಾಜಿನಲ್ಲಿ ಪಾಲ್ಗೊಳ್ಳಲು ಆಗಿಲ್ಲ, ಬದಲಿಗೆ ಯಶಸ್ವಿ ಬಿಡ್ ದಾರ ನೀಡಿದ ಮೊತ್ತವನ್ನೇ ನೀಡಿರುವದರಿಂದ ತೀವ್ರ ಹೊರೆ ಆಗಿದೆ ಎಂದು ಹೇಳಿದ್ದಾರೆ.
ಇದೇ ಹಣಕಾಸು ವರ್ಷದಲ್ಲಿ ಮೊದಲ ಬಾರಿಗೆ ಬಿಎಸ್ಎನ್ಎಲ್ ನಷ್ಟ ಅನುಭವಿಸಿದೆ ಎಂದೂ ಪತ್ರದಲ್ಲಿ ತಿಳಿಸಿದ್ದು , ಪಾವತಿಸಿದ 3ಜಿ ಸೇವಾ ಹಣವನ್ನು ಹಿಂತಿರುಗಿಸುವಂತೆ ಸರ್ಕಾರವನ್ನು ಕೋರಲಾಗಿದೆ. ಅಲ್ಲದೆ ಹೊಸ ಟೆಲಿಕಾಮ್ ನೀತಿ 1999 ರ ಪ್ರಕಾರ ಸೆಲ್ಯುಲಾರ್ ಮೊಬೈಲ್ ಪರವಾನಗಿ ಪಡೆಯಲು ಶುಲ್ಕ ವಿನಾಯ್ತಿ ನೀಡಲಾಗಿದ್ದು, 2ಜಿ ಸೇವೆಗೂ ನೀಡಬೇಕಾಗಿದ್ದ 1,650ಕೋಟಿ ರೂಪಾಯಿಗಳ ಶುಲ್ಕದಿಂದ ವಿನಾಯ್ತಿ ನೀಡಿರುವದನ್ನೂ ಎ.ರಾಜಾ ಪತ್ರದಲ್ಲಿ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications