ದಯವಿಟ್ಟು ಈ ಮಕ್ಕಳನ್ನು ಕೂಡಲೇ ರಕ್ಷಿಸಿ!

ಪಟ್ಟಣದ ಜೆ.ಸಿ. ರಸ್ತೆಯ ಹಿಂಭಾಗದ ತಮಿಳು ಕಾಲೋನಿಯಲ್ಲಿ 4 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕ ಶೌಚಾಲಯ ಕಟ್ಟಡವೇ ಅಂಗನವಾಡಿ ಕೇಂದ್ರವಾಗಿ ಮಾರ್ಪಾಡಾಗಿದ್ದು, ಈ ಕಟ್ಟಡದಲ್ಲಿ ಅಂಗನವಾಡಿ ತೆರೆಯಲು ಅನುಮತಿ ನೀಡಿದ ಪುಣ್ಯಾತ್ಮರಾದರೂ ಯಾರು ಎಂಬುದು ಈಗ ಪ್ರಶ್ನಾರ್ಹ ವಿಚಾರವಾಗಿದೆ.
ಬಡವರು, ಅನಕ್ಷರಸ್ಥರು, ಕೂಲಿಕಾರ್ಮಿಕರೇ ಹೆಚ್ಚಾಗಿರುವ ಈ ಕಾಲೋನಿಯ ಜನತೆಗೆ ಅನುಕೂಲವಾಗಲೆಂದು 2003-04ನೇ ಸಾಲಿನ ನಿರ್ಮಲ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯು ಈ ಸಾರ್ವಜನಿಕ ಶೌಚಾಲಯ ನಿರ್ಮಿಸಿತ್ತು. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೋ, ಬೇಜವಾಬ್ದಾರಿವೋ ಅಥವಾ ಚುನಾಯಿತ ಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಲೋ, ಸಾರ್ವಜನಿಕ ಶೌಚಾಲಯವು ಸದ್ಬಳಕೆಯಾಗದೆ ನಿರುಪಯುಕ್ತವಾಗಿದೆ. ಈ ಬಗ್ಗೆ ದು(ದೂ)ರಾಲೋಚನೆ ನಡೆಸಿದ ಕೆಲವರು ಬಳಕೆಗೆ ಬಾರದ ಈ ಶೌಚಾಲಯ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ.
ಬಡಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚಿರುವ ಈ ಅಂಗನವಾಡಿ ಕೇಂದ್ರಕ್ಕೆ ಹೊಂದಿಕೊಂಡಂತೆ ಇರುವ ಚರಂಡಿಯಲ್ಲಿ ಕಸ ಕಡ್ಡಿ, ಕೊಳಕು ನೀರಿನಿಂದ ತುಂಬಿ ದುರ್ನಾತ ಬೀರುತ್ತಿದ್ದು, ದಿನನಿತ್ಯ ಚರಂಡಿಯ ಕೊಳಕು ನೀರು ಅಂಗನವಾಡಿ ಕಂ ಶೌಚಾಲಯದ ಮುಂದೆ ನಿಂತು, ಸಹಿಸಲಸಾಧ್ಯವಾದ ವಾಸನೆಯಿಂದ ನಾರುತ್ತಿದೆ. ಸಣ್ಣ ಮಕ್ಕಳು ಪ್ರತಿದಿನ ಈ ನರಕಯಾತನೆಯಲ್ಲಿ ಪಾಠ ಕೇಳುತ್ತಾರೆ ಎಂಬುದು ಆತಂಕದ ವಿಚಾರವಾಗಿದೆ. ಇದೆಲ್ಲ ಗೊತ್ತಿದ್ದೂ ಗೊತ್ತಿಲ್ಲದಂತಿರುವ ಅಧಿಕಾರಿಗಳು ಮೂಗು ಮಾತ್ರವಲ್ಲ ಕಿವಿ, ಕಣ್ಣು ಮುಚ್ಚಿ ಕುಳಿತಿದ್ದಾರೆ.
ಹೇಳಿ ಕೇಳಿ ಇದು ಕೊಳಚೆ ಪ್ರದೇಶ. ಕೊಳಚೆ ನೀರು ಮುಂದೆ ಹೋಗದೆ ನಿಂತಲ್ಲೇ ನಿಂತು ಸೊಳ್ಳೆಗಳ ಸಂತಾನ ಪ್ರತಿದಿನ ಹೆಚುತ್ತಿದೆ. ದುರ್ನಾತ, ಕೊಳೆತ ನೀರು, ಸೊಳ್ಳೆಗಳ ಹಾವಳಿ, ಕಸ ಕಡ್ಡಿಗಳ ರಾಶಿ ಇವುಗಳ ಮಧ್ಯೆ ಪುಟ್ಟ ಕಂದಮ್ಮಗಳು ಅಂಗನವಾಡಿ ಕೇಂದ್ರವೆಂಬ ಈ ಕೊಂಪೆಯಲ್ಲಿ ಪ್ರತಿದಿನ ಕೂರುತ್ತಿದ್ದಾರೆಂದರೆ ತಾಲೂಕು ಆಡಳಿತದ ಮಟ್ಟವನ್ನು ಒಮ್ಮೆ ಊಹಿಸಿಕೊಳ್ಳಿ. ಇದರ ಮಧ್ಯೆಯೇ ಈ ಕೊಳಕು ಜಾಗದಲ್ಲಿ ತಯಾರಿಸುವ ಮಧ್ಯಾಹ್ನದ ಊಟವನ್ನು ತಿನ್ನಬೇಕಾದ ದುಃಸ್ಥಿತಿ ಮಕ್ಕಳಿಗೆ ಒದಗಿ ಬಂದಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಇವರಿಗಿರುವ ಕಾಳಜಿ ಪ್ರಶ್ನಾರ್ಹವಾಗಿದೆ.
ಈ ವಾತಾವರಣ ಅಕ್ಕ-ಪಕ್ಕದ ಮನೆಯ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯವೈಖರಿಗೆ ಇಲ್ಲಿನ ಜನ ಬೇಸತ್ತಿದ್ದಾರೆ. ಇಲ್ಲಿ ಹೇಳಲು-ಕೇಳಲು ಯಾರೂ ಇಲ್ಲ, ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದೇವೆ ಎಂದು ಅಲ್ಲಿನ ಜನತೆ ತಮ್ಮ ಅಳಲು ತೋಡಿಕೊಳ್ಳುತ್ತಾರೆ. ಈ ಬಗ್ಗೆ ಕೊಳಚೆ ನಿರ್ಮೂಲನಾ ಮಂಡಳಿಗೆ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಇಲ್ಲಿನ ನಾಗರೀಕರು ದೂರಿದ್ದಾರೆ.
ಮಕ್ಕಳ ಪೋಷಣೆಯ ಜವಾಬ್ದಾರಿ ಹೊತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಾಲೂಕಿನಲ್ಲಿ ಇದ್ದಾರೆಯೇ ಎಂಬ ಅನುಮಾನ ಈ ಪರಿಸ್ಥಿತಿಯಿಂದ ಹೊರಬಂದಿದ್ದು, ಕಛೇರಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಈ ಅಂಗನವಾಡಿ ಕಂ ಶೌಚಾಲಯ ಇವರಿಗೆ ಗೋಚರಿಸಲಿಲ್ಲವೇ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.
ಪಟ್ಟಣ ಪ್ರದೇಶದಲ್ಲಿಯೇ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿ, ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾವಣೆ ಮಾಡಿ, ಮಕ್ಕಳಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಸರ್ಕಾರ ಅಂಗನವಾಡಿ ಕೇಂದ್ರಗಳ ಕಟ್ಟಡಗಳಿಗೆ ಕೋಟ್ಯಾಂತರ ರೂ. ಹಣ ವ್ಯಯ ಮಾಡುತ್ತಿದೆ, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸೂಕ್ತವಾದ ಜಾಗ ಒದಗಿಸಿ, ಅಂಗನವಾಡಿ ಕಟ್ಟಡ ನಿರ್ಮಿಸಿ, ಅಮಾಯಕ ಮಕ್ಕಳು ಪಡುವ ತೊಂದರೆ ತಪ್ಪಿಸಲು ಮುಂದಾಗಬೇಕಿದೆ.
ಬರಿ ಸ್ವಚ್ಚತೆ ಕಾಪಾಡುವುದಷ್ಟೇ ಅಲ್ಲ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಎಂಬುವರು ತಾಲೂಕಿನಲ್ಲಿದ್ದರೆ ಕೂಡಲೇ ಇತ್ತ ಧಾವಿಸಿ, ಈ ಕೊಂಪೆಯಿಂದ ಮಕ್ಕಳನ್ನು ರಕ್ಷಿಸಿ, ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ತಾಲೂಕು ಆಡಳಿತವೂ ಸಹ ಗಮನಹರಿಸಿ ಕ್ರಮ ಕೈಗೊಳ್ಳುವುದೇ ಎಂಬುದನ್ನು ಕಾದುನೋಡಬೇಕಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications