ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚಾನಾ ಪರಮಾತ್ಮನು!

ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸ್ವಂತ ವಾಹನವನ್ನು ಬಳಸದೆ, ಸಾಮೂಹಿಕ ಸಾರಿಗೆಯನ್ನು ಇಲ್ಲವೇ ಕಾಲೇಜು ಆಡಳಿತ ಮಂಡಳಿ ನಿಯೋಜಿಸಿರುವ ಬಸ್ಸಿನಲ್ಲಿ ಮಾತ್ರ ಬರಬೇಕು ಎಂಬ ನೋಟಿಸ್ ನೀಡಿರುವುದು ರಾಜ್ಯಾದ್ಯಂತ ವ್ಯಾಪಕ ಪರ-ವಿರೋಧ ವ್ಯಕ್ತವಾಗಿದೆ. ಉಳ್ಳವರ ಮಕ್ಕಳಿಗೆ ಕುಲಪತಿಗಳ ಹೊಸ ನೋಟಿಸ್ ಕಿರಿಕಿರಿ ಎನಿಸಿದ್ದು, ತಿರುಗಿ ಬಿದ್ದಿರುವ ವಿದ್ಯಾರ್ಥಿಗಳು ಕುಲಪತಿಗಳು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ ಎಂಬ ಪ್ರಶ್ನೆಯನ್ನು ಎಸೆದಿದ್ದರು.
ವಿದ್ಯಾರ್ಥಿಗಳ ಈ ಪ್ರಶ್ನೆಯನ್ನು ಸವಾಲಾಗಿ ಸ್ವೀಕರಿಸಿದ ಕುಲಪತಿ ಮಹೇಶಪ್ಪ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವುದು ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕುಲಪತಿ ಮಹೇಶಪ್ಪ, ಇದು ನನ್ನ ಕನಸಿನ ಕೂಸು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆನ್ನು ಹೋಗಲಾಡಿಸುವುದು ನಮ್ಮೆಲ್ಲರ ಜವಾಬ್ದಾರಿ. ಜೊತೆಗೆ ವಿದ್ಯಾರ್ಥಿಗಳ ರಕ್ಷಣೆ ನಮ್ಮ ಮೇಲಿದೆ. ನನ್ನ ಕೂಸಿಗೆ ವಿದ್ಯಾರ್ಥಿಗಳಿಂದ ಭಾರಿ ವಿರೋಧ ವ್ಯಕ್ತವಾಯಿತು. ಇಷ್ಟಕ್ಕೆ ಸುಮ್ಮನಾಗದ ಅವರು, ನನ್ನನ್ನು ಕೂಡಾ ಬಸ್ಸಿನಲ್ಲಿ ಬರವಂತೆ ಪ್ರೇರೆಪಿಸಿದರು.
ವಿದ್ಯಾರ್ಥಿಗಳ ಮಾತು ಸತ್ಯ. ವಿಶ್ವವಿದ್ಯಾಲಯದಿಂದ ಹೊರಡಿಸಲಾಗಿರುವ ನೂತನ ಕಾಯ್ದೆ ವಿದ್ಯಾರ್ಥಿಗಳಿಗೆ ಮಾತ್ರವವಲ್ಲ. ಪ್ಯಾಕಲ್ಟಿ ಹಾಗೂ ಕುಲಪತಿಗೂ ಆನ್ವಯಿಸುತ್ತದೆ. ಹೀಗಾಗಿ ನಾನು ಕೂಡ ಮುಂದಿನ ದಿನಗಳಲ್ಲಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತೇನೆ ಎಂದು ಮಹೇಶಪ್ಪ ವಿವರಿಸಿದ್ದಾರೆ. ನನ್ನ ಮಕ್ಕಳು ಕೂಡಾ ಇಂಜಿನಿಯರಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ನನ್ನ ಮಗ ಬಿಎಂಟಿಸಿ ಬಸ್ಸಿನಲ್ಲಿ ಕಾಲೇಜಿಗೆ ತೆರಳುತ್ತಿದ್ದರೆ, ಮಗಳು ಕಾಲೇಜಿನ ಬಸ್ಸಿನ ಹೋಗುತ್ತಿದ್ದಾಳೆ. ಇದರಿಂದ ಅಪಘಾತಗಳನ್ನು ತಪ್ಪಿಸಬಹುದು ಜೊತೆಗೆ ಮಾಲಿನ್ಯ ನಿಯಂತ್ರಣ ಸಾಧ್ಯ ಎಂದು ಅವರು ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications