ಎಂಇಎಸ್ ಪುಂಡಾಟ; ಕರವೇ ಫಲಕಕ್ಕೆ ಬೆಂಕಿ

ಕನ್ನಡಿಗರ ಸ್ವಾಭಿಮಾನಕ್ಕೆ ಕಿಚ್ಚುಹಚ್ಚಿ ಸದಾ ಮುಖಭಂಗ ಅನುಭವಿಸುತ್ತಿರುವ ಎಂಇಎಸ್, ಬೆಳಗಾವಿ ತಾಲೂಕಿನ ಯಲ್ಲೂರು ಗ್ರಾಮ ಪಂಚಾಯತಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ನಿರ್ಣಯ ತೆಗೆದುಕೊಂಡಿದೆ. ಕೇಂದ್ರ ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಎಂಇಎಸ್ ನ ಮೂರು ಬಣಗಳು ಸಭೆ ಸೇರಿ ಒಮ್ಮತದ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲವಾಗಿ ಸಭೆಯಲ್ಲೇ ವಾಗ್ಯುದ್ಧಕ್ಕೆ ತೊಡಗಿಕೊಂಡಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಹಿತಾಶಕ್ತಿ ರಕ್ಷಿಸಲು ವಿಫಲರಾಗಿರುವ ಕೇಂದ್ರದಲ್ಲಿರುವ ರಾಜ್ಯದ ಮೂವರು ಸಚಿವರುಗಳಾದ ಶರದ್ ಪವಾರ್, ಸುಶೀಲ್ ಕುಮಾರ್ ಶಿಂಧೆ ಮತ್ತು ವಿಲಾಸರಾವ್ ದೇಶಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂಇಎಸ್ ಒತ್ತಾಯಿಸಿದೆ. ಈ ಮಧ್ಯೆ ಕೇಂದ್ರ ಸರಕಾರ ಮೂರನೇ ಬಾರಿಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಮಾಣಪತ್ರ ಸಲ್ಲಿಸಿದೆ. ಇದುವರೆಗೂ ಮಹಾರಾಷ್ಟ್ರದ ಒತ್ತಡಕ್ಕೆ ಮಣಿಯುತ್ತಿದ್ದ ಕೇಂದ್ರ ಸರಕಾರ ಈ ಬಾರಿ ರಾಜ್ಯದ ಪರವಾಗಿ ದೃಢ ನಿಲುವು ತಾಳಿರುವುದು ಗಮನಾರ್ಹ.
ಎಂಇಎಸ್ ಪುಂಡಾಟಕ್ಕೆ ಪ್ರತಿಕ್ರಿಯೆ ನೀಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ,ಎಂಇಎಸ್ ಪುಂಡಾಟಿಕೆಯ ಅಂತ್ಯದ ದಿನಗಳು ಆರಂಭವಾಗಿದೆ. ಇನ್ನು ಮುಂದೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ ಎಂದು ಮನಗಂಡಿರುವ ಕಾರ್ಯಕರ್ತರು ಗಲಭೆ ಸೃಷ್ಟಿಸಲು ಹೊರಟಿದ್ದಾರೆ. ಕರವೇ ಸಂಧರ್ಭಾನುಸಾರ ತಕ್ಕ ಉತ್ತರ ನೀಡಲಿದೆ ಎಂದು ಹೇಳಿಕೆ ನೀಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications