ಮೇಲ್ಮನೆಯಲ್ಲೂ ಗೋಹತ್ಯೆ ವಿಧೇಯಕ ಅಂಗೀಕಾರ

ಪಶು ಸಂಗೋಪನಾ ಸಚಿವ ರೇವುನಾಯಕ ಬೆಳಮಗಿ ಗುರುವಾರ ಮೇಲ್ಮನೆಯಲ್ಲಿ ಪ್ರಸ್ತಾಪಿಸಿದ ಈ ನೂತನ ವಿಧೇಯಕಕ್ಕೆ ಪ್ರಸ್ತಾವನೆಯ ಪರ 27 ಹಾಗೂ ವಿರೋಧವಾಗಿ 23 ಮತಗಳು ಚಲಾಯಿಸಲ್ಪಟ್ಟವು.
ಆಚಾರ್ಯ Vs ಮೋಟಮ್ಮ ಗದ್ದಲ:ವಿಧೇಯಕ ಅಂಗೀಕರಿಸಲ್ಪಟ್ಟ ಬಳಿಕ ವಿಪಕ್ಷಗಳ ಸದಸ್ಯರು ಈ ಕುರಿತ ಚರ್ಚೆಯನ್ನು ಸೋಮವಾರ ತೆಗೆದುಕೊಳ್ಳುವಂತೆ ಸಭಾಪತಿಯವರಿಗೆ ಮನವಿ ಮಾಡಿದರು. ಆದರೆ, ಸಭಾ ನಾಯಕ ಡಾ.ವಿಎಸ್ ಆಚಾರ್ಯ, ಈ ವಿಧೇಯಕದ ಕುರಿತ ಇಂದೇ ಬೇಕಾದರೂ ಚರ್ಚೆಯಾಗಲಿ ಎಂದರು.
2008ರ ಚುನಾವಣೆಯಲ್ಲಿ ತಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಜನತೆಗೆ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಇದನ್ನು ನಂಬಿಯೇ ಜನ ನಮಗೆ ಮತ ನೀಡಿದ್ದಾರೆ. ಸಂವಿಧಾನದಲ್ಲಿಯೂ ಇದನ್ನೇ ಹೇಳಲಾಗಿದೆ. ಅಧಿಕಾರಕ್ಕಾಗಿ ಅಲ್ಲದಿದ್ದರೂ ದೇಶದ ನಂಬಿಕೆ ಜನಗಳ ಪ್ರೀತಿ ನಮ್ಮ ಮೇಲಿದೆ ಎಂದು ಆಚಾರ್ಯ ಹೇಳಿದರು.
ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕಿ ಮೋಟಮ್ಮ,ಈ ಸರ್ಕಾರಕ್ಕೆ ಜನಗಳ ಮೇಲೆ ಪ್ರೀತಿ ಎಷ್ಟಿದೆ, ದನಗಳ ಮೇಲೆ ಪ್ರೀತಿ ಎಷ್ಟಿದೆ ಎಂಬುದು ಜನತೆಗೆ ಗೊತ್ತಾಗಲಿ ಎಂದು ವಾಗ್ದಾಳಿ ನಡೆಸಿದರು. ದುರುದ್ದೇಶದಿಂದ ತರಲಾಗುತ್ತಿರುವ ಈ ಮಸೂದೆಗೆ ಅಂಬೇಡ್ಕರ್ ಹೆಸರನ್ನೇಕೆ ಬಳಸಿಕೊಳ್ಳುತ್ತೀರಾ ಎಂದು ಹರಿಹಾಯ್ದರು.
ಇದಕ್ಕೆ ಅಷ್ಟೇ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಆಚಾರ್ಯ ಅವರು ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಒಪ್ಪಿಕೊಂಡು ಅವರನ್ನು ಪೂಜ್ಯ ಭಾವನೆಯಿಂದ ಕಾಣಲಾಗುತ್ತಿದೆ ಎಂದು ಹೇಳುತ್ತಿದ್ದಂತೆ ಅದೇ ಅಂಬೇಡ್ಕರ್ ಭಾವಚಿತ್ರಗಳಿಗೆ ಚಪ್ಪಲಿ ಹಾರವನ್ನೂ ಹಾಕಿ ಅಪಮಾನ ಮಾಡಲಾಗುತ್ತಿದೆ ಎಂದು ಜರಿದರು.
ಈ ವಿಧೇಯಕ ರೈತರು, ಬಡವರ ವಿರೋಧಿ ಮಸೂದೆ ಎಂದು ಪ್ರತಿಪಕ್ಷಗಳ ಸದಸ್ಯರು ಗದ್ದಲ ನಡೆಸಿದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರೂ ಎದ್ದು ನಿಂತು ವಿಧೇಯಕವನ್ನು ಸಮರ್ಥಿಸಿಕೊಂಡರು.
ಈ ವಿಧೇಯಕದ ಮೇಲಿನ ಚರ್ಚೆಗೆ ಸೋಮವಾರ ಅವಕಾಶ ನೀಡುವುದಾಗಿ ರೂಲಿಂಗ್ ನೀಡುವ ಮೂಲಕ ಸಭಾಪತಿ ಶಂಕರಮೂರ್ತಿ ಸದನವನ್ನು ಶಾಂತಿಗೊಳಿಸಿದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications