ಸಾಕ್ಷಾತ್ ರಣಾಂಗಣವಾದ ವಿಧಾನಸಭೆ

ವಿಧಾನಸಭೆ ಶುಕ್ರವಾರ ಸಾಕ್ಷಾತ್ ಕುಸ್ತಿಯ ಅಖಾಡವಾಗಿ ಪರಿವರ್ತಿತವಾಗಿತ್ತು. ಕೆಲವರು ತೋಳೇರಿಸಿದರು, ಕೆಲವರು ತೊಡೆತಟ್ಟಿದರು, ಇನ್ನು ಕೆಲವರು ರಟ್ಟೆ ತಟ್ಟುತ್ತ ಕುಸ್ತಿಗೆ ಆಹ್ವಾನ ನೀಡುತ್ತಿದ್ದರು. ಈಡಿಯಟ್ಸ್, ಲೋಫರ್ಸ್... ಮುಂತಾದ ಅವಾಚ್ಯ ಶಬ್ದಗಳಿಂಗಂತೂ ಬರವೇ ಇರಲಿಲ್ಲ.
ಯಾರಿಗೂ ಕಡಿಮೆಯಿಲ್ಲದಂತೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕೈಕೈ ಮಿಲಾಯಿಸಿದರು. ಆರೋಗ್ಯಕರ ಚರ್ಚೆಗೆ ವೇದಿಕೆ ಕಲ್ಪಿಸಬೇಕಾಗಿದ್ದ ಸದನ, ಬದ್ಧ ವೈರಿಗಳು ಕಾದಾಡುವ ರಣಾಂಗಣವಾಗಿತ್ತು.
ನಡೆದದ್ದಿಷ್ಟು : ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ನೀಡಿರುವ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿವರ ನೀಡುತ್ತಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಉತ್ತರವನ್ನು ಅರ್ಧಕ್ಕೆ ನಿಲ್ಲಿಸಿ, ಮುಂದೆ ಮಾತಾಡಲು ಗಣಿಧಣಿ ಜನಾರ್ಧನ ರೆಡ್ಡಿಗೆ ಅವಕಾಶ ಮಾಡಿಕೊಟ್ಟರು.
ಇದರಿಂದ ಕೆರಳಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಈ ಹಗರಣಕ್ಕೆ ಮುಖ್ಯಮಂತ್ರಿಯೇ ಸಂಪೂರ್ಣ ಉತ್ತರ ನೀಡಬೇಕು ಮತ್ತು ಎಲ್ಲ ಪ್ರಶ್ನೆಗಳಿಗೆ ಸ್ಪಷ್ಟೀಕರಣ ನೀಡಬೇಕು ಎಂದು ಪಟ್ಟುಹಿಡಿದರು. ಅವರೂ ಒಪ್ಪಲಿಲ್ಲ, ಇವರೂ ಕೈಬಿಡಲಿಲ್ಲ. ಕೊನೆಗೆ ವಿರೋಧ ಪಕ್ಷದವರು ಸದನದ ಬಾವಿಗೆ ನುಗ್ಗಿ ವಿರೋಧ ವ್ಯಕ್ತಿಪಡಿಸಿದರು.
ಮುಂದಿನ ಕಾಳಗದ ವಾಸನೆ ಗ್ರಹಿಸಿದ ಸಭಾಧ್ಯಕ್ಷರು ಸದನವನ್ನು ಮುಂದೂಡಿದರು. ನಂತರ ಶುರುವಾದದ್ದೇ ರಣಯುದ್ಧ. ಸದನದಲ್ಲೇ ಬಳ್ಳಾರಿಯನ್ನು ತಂದಿರಲ್ಲ ಎಂದು ದಿನೇಶ್ ಗುಂಡೂರಾವ್ ಅವರು ರೆಡ್ಡಿಗಳ ಕುರಿತು ಆಡಿತ ಮಾತು ರೆಡ್ಡಿ ಸಹೋದರರನ್ನು ತೀವ್ರವಾಗಿ ಕೆರಳಿಸಿತು. ಈಡಿಯಟ್ಸ್, ಲೋಫರ್ಸ್, ರೌಡಿಗಳಾ, ಗೆಟೌಟ್ ಎಂಬ 'ನಯವಾದ' ಮಾತುಗಳು ಎಲ್ಲೆಂದರಲ್ಲಿ ಹಾರಾಡಲು ಶುರು ಮಾಡಿದವು. ಕೆಲವರು ಕೈಕೈ ಮಿಲಾಯಿಸುವ ಹಂತಕ್ಕೂ ಇಳಿದರು.
ಐವರ ವಿರುದ್ಧ ದೂರು : ಅವಾಚ್ಯ ಶಬ್ದಗಳನ್ನು ಬಳಸಿದ ಜನಾರ್ಧನ ರೆಡ್ಡಿ, ಕರುಣಾಕರ ರೆಡ್ಡಿ, ಸುರೇಶ್ ಬಾಬು ಮುಂತಾದ ಐವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಪಕ್ಷ ಸಭಾಧ್ಯಕ್ಷರಿಗೆ ದೂರು ನೀಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications