ಹೆಗ್ಡೆ ಬೇಡಿಕೆಗಳನ್ನು ರಾಜ್ಯ ಶೀಘ್ರ ನೆರವೇರಿಸಲಿ; ಆಡ್ವಾಣಿ

ಕರ್ನಾಟಕ ಲೋಕಾಯುಕ್ತರಾಗಿ ಮುಂದುವರೆಯ ಬೇಕು ಎಂಬ ತಮ್ಮ ಮಾತಿಗೆ ತಕ್ಷಣ ಸ್ಪಂದಿಸಿದ್ದಕ್ಕೆ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಳನ್ನು ತಿಳಿಸುತ್ತೇನೆ. ಶೀಘ್ರದಲ್ಲೆ ಅವರ 'ಪರಮಾಧಿಕಾರ' ಬೇಡಿಕೆ ಈಡೇರಲಿದೆ ಎಂದು ಆಡ್ವಾಣಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಹಾಗೂ ಭ್ರಷ್ಟಾಚಾರವನ್ನು ತಡೆಯಲು ಸರಕಾರ ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಹೆಗ್ಡೆ ಅವರು ಜೂನ್.23ರಂದು ರಾಜೀನಾಮೆ ಸಲ್ಲಿಸಿದ್ದರು.
ಜುಲೈ 3ರಂದು ಆಡ್ವಾಣಿ ಅವರ ಸೂಚನೆ ಮೇರೆಗೆ ಹೆಗ್ಡೆ ಅವರು ರಾಜೀನಾಮೆಯನ್ನು ಹಿಂಪಡೆದಿದ್ದರು. ಭ್ರಷ್ಟಾಚಾರ ತಡೆಗೆ ಹೆಚ್ಚಿನ ಅಧಿಕಾರ ಕೊಡಿಸುವ ಭರವಸೆಯನ್ನು ಆಡ್ವಾನಿ ನೀಡಿದ್ದರು. ಸಂತೋಷ್ ಹೆಗ್ಡೆ ಅವರ ತಂದೆ ಮಾಜಿ ಸಂಸದ ಕೆ ಎಸ್ ಹೆಗ್ಡೆ ಅವರು ಭಾರತದ ರಾಷ್ಟ್ರಪತಿಯಾಗುವ ಅವಕಾಶವಿತ್ತು ಎಂದು ತಮ್ಮ ಬ್ಲಾಗಿನಲ್ಲಿ ಆಡ್ವಾಣಿ ಹಳೆಯದನ್ನು ನೆನಪಿಸಿಕೊಂಡಿದ್ದಾರೆ.
ಅಂದಿನ ಪ್ರಧಾನಿ ಮೊರಾರ್ಜಿ ದೇಸಾಯಿ ಅವರೊಂದಿಗೆ ರಾಷ್ಟ್ರಪತಿ ಯಾರಾಗ ಬೇಕು ಎಂಬ ಚರ್ಚೆ ನಡೆದಿತ್ತು...ರಾಷ್ಟ್ರಪತಿ ಹುದ್ದೆಗೆ ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಅವರಿಗಿಂತಲೂ ಉತ್ತಮ ವ್ಯಕ್ತಿಯ ಹೆಸರು ನನಗೆ ನೆನಪಾಗುತ್ತಿಲ್ಲ ಎಂದು ಮೊರಾರ್ಜಿ ಅವರಿಗೆ ತಾವು ಹೇಳಿದ್ದಾಗಿ ಆಡ್ವಾಣಿ ತಮ್ಮ ಬ್ಲಾಗಿನಲ್ಲಿ ಬರೆದುಕೊಂಡಿದ್ದಾರೆ.
ಆದರೆ 1977ರಲ್ಲಿ ಕೆ ಎಸ್ ಹೆಗ್ಡೆ ಅವರ ಬದಲಾಗಿ ಎನ್ ಸಂಜೀವ ರೆಡ್ಡಿ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರು. ಕೆ ಎಸ್ ಹೆಗ್ಡೆ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದರು ಎಂದು ಆಡ್ವಾಣಿ ಹಳೆಯ ನೆನಪುಗಳನ್ನು ಕೆದಕಿದ್ದಾರೆ. ರಾಜ್ಯ ಸರಕಾರ ಲೋಕಾಯುಕ್ತರಿಗೆ ರಾಜಕಾರಣಿಗಳನ್ನು ಬಿಟ್ಟು ಅಧಿಕಾರಿಗಳ ಮೇಲೆ ದಾಳಿ ನಡೆಸುವ ಅಧಿಕಾರ ನೀಡಿದ್ದಾರೆ.
ಸಂತೋಷ್ ಹೆಗ್ಡೆ ಅವರು ಕೇಳಿದ್ದರಲ್ಲಿ ಶೇ.50ರಷ್ಟು ಅಧಿಕಾರವನ್ನು ನೀಡಲಾಗಿದೆ. ಏನು ಅಧಿಕಾರ ನೀಡಿದ್ದಾರೋ ಅಷ್ಟರಲ್ಲೆ ಕೆಲಸ ಮುಂದುವರಿಕೊಂಡು ಹೋಗುವುದಾಗಿ ಹೆಗ್ಡೆ ಅವರು ಹೇಳಿದ್ದಾರೆ. ಎಲ್ಲಿಯ ತನಕ ಕೆಲಸ ಮಾಡಲು ಸಾಧ್ಯವೋ ಅಲ್ಲಿ ತನಕ ಕೆಲಸ ನಿರ್ವಹಿಸುವ ಮಾತನ್ನು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications