ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜು.14ಕ್ಕೆ ಪೂರ್ಣಚಂದ್ರತೇಜಸ್ವಿ ಪ್ರಶಸ್ತಿ ಸಮಾರಂಭ

By Mahesh
|
Google Oneindia Kannada News

Ekavi Poornachandra Tejaswi Award ceremony
ಬೆಂಗಳೂರು, ಜು.11: ಎಲ್ಲ ಕನ್ನಡಾಭಿಮಾನಿಗಳ ಅಂತಾರಾಷ್ಟ್ರೀಯ ವೇದಿಕೆ(ಈಕವಿ)ಯ 'ಈಕವಿ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಲಕ್ಷ್ಮೀಪತಿ ಕೋಲಾರ ಹಾಗೂ 'ಪೂರ್ಣಚಂದ್ರ ತೇಜಸ್ವಿ' ಪ್ರಶಸ್ತಿಗೆ ಗಣಕ ತಜ್ಞ ಎನ್. ಅನ್ಬರಸನ್ ಅವರು ಆಯ್ಕೆಯಾಗಿದ್ದಾರೆ.

ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಇಬ್ಬರನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜು.14 ರಂದು ಸಂಜೆ 6ಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆಯಲಿದೆ.

ಸಚಿವ ಬಸವರಾಜ ಬೊಮ್ಮಾಯಿ, ಡಾ.ಎಲ್. ಹನುಮಂತಯ್ಯ, ಡಾ.ಚಂದ್ರಶೇಖರ ಕಂಬಾರ, ಪ್ರೊ.ಎಲ್.ಎನ್. ಮುಕುಂದರಾಜ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ಈಕವಿ ಸಂಸ್ಥೆಯ ವಿ.ಎಂ. ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X