ಎಚ್ಡಿಕೆ ಹೇಳಿಕೆ, ಬಿಜೆಪಿ ನಾಯಕರ ವಾಕ್ ಔಟ್

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕುಮಾರಸ್ವಾಮಿ ಮಾತನಾಡುತ್ತಾ, ಎಂಪಿ ಪ್ರಕಾಶ್ ಅವರು ನನಗೆ ತಂದೆ ಸಮಾನರು. ವೇದಿಕೆಯಲ್ಲಿ ಜನತಾ ಪರಿವಾರದ ನಾಯಕರಿದ್ದಾರೆ. ಆದರೆ ಈಶ್ವರಪ್ಪ ಮತ್ತು ರಾಮಚಂದ್ರ ಗೌಡ ಬೇರೆಯವರು. ಹೀಗಾಗಿ ನನ್ನ ಭಾವನೆಯನ್ನು ಮುಕ್ತವಾಗಿ ಹೇಳಿಕೊಳ್ಳಲು ಆಗುವುದಿಲ್ಲ. 2007ರಿಂದ ಇತ್ತೀಚಿಗೆ ಭಯೋತ್ಪಾದಕ ಚಟುವಟಿಕೆಗಳ ಪೈಕಿ ಏಳರಲ್ಲಿ ಹಿಂದೂ ಸಂಘಟನೆಗಳ ಕೈವಾಡವಿದೆ ಎಂದು ಔಟ್ ಲುಕ್ ಪತ್ರಿಕೆ ವರದಿ ಮಾಡಿದೆ ಎಂದು ಆರ್ಎಸ್ಎಸ್ ಹೆಸರು ಪ್ರಸ್ತಾಪ ಮಾಡಿದರು. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ ಮತ್ತು ರಾಮಚಂದ್ರ ಗೌಡ ಆಕ್ಷೇಪಿಸಿದರು. ಕೆಲ ಸಭಿಕರು ಕೂಡ ಈ ವಿಚಾರ ಬೇಡವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಇದರಿಂದ ವಿಚಲಿತರಾದ ಎಚ್ಡಿಕೆ, ಈಶ್ವರಪ್ಪ ಅವರೇ ಸಾರಿ ಎಂದು ಕ್ಷಮೆ ಯಾಚಿಸಿದರು. ಇದಕ್ಕೆ ಸ್ಪಂದಿಸದ ಇಬ್ಬರೂ ಬಿಜೆಪಿ ನಾಯಕರುಗಳು ಪ್ರಕಾಶ್ ಅವರಿಗೆ ಅಭಿನಂದಿಸಿ, ಪೇಜಾವರ ಶ್ರೀಗಳಿಗೆ ನಮಸ್ಕರಿಸಿ ಸಭೆಯಿಂದ ಹೊರ ನಡೆದರು. ಸಭೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ವಿದೇಶಾಂಗ ಸಚಿವ ಎಸ್ಎಂ ಕೃಷ್ಣ, ಆರ್ ವಿ ದೇಶಪಾಂಡೆ, ಪಿಜಿಆರ್ ಸಿಂಧ್ಯಾ ಮುಂತಾದವರು ಭಾಗವಹಿಸಿದ್ದರು.
ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಪೇಜಾವರ ಶ್ರೀಗಳು, ಹಿಂದೂಗಳ ಭಯೋತ್ಪಾದನೆ ಆತಂಕಕಾರಿ. ಆದರೆ ಈಗ ನಡೆಯುತ್ತಿರುವುದು ಮುಸ್ಲಿಂ ಭಯೋತ್ಪಾದನೆ. ಹಿಂದೂಗಳ ಬಗ್ಗೆ ಆಕ್ಷೇಪ ಎತ್ತುವ ಚಿಂತಕರು ಮತ್ತು ರಾಜಕಾರಿಣಿಗಳು ಮುಸ್ಲಿಂ ಭಯೋತ್ಪಾದನೆ ಕುರಿತೂ ಅಷ್ಟೇ ಗಟ್ಟಿಯಾಗಿ ಮಾತನಾಡಬೇಕು. ಸಣ್ಣ ಪ್ರಮಾಣದಲ್ಲಿ ಹಿಂದೂ ಭಯೋತ್ಪಾದನೆ ನಡೆದಿರಬಹುದು. ಆದರೆ ಅದು ದೊಡ್ಡದಾಗಲು ಬಿಡಬಾರದು. ನಾನು ಲೋಹಿಯಾ ಮತ್ತು ಜೆಪಿ ಅವರ ತತ್ವದಿಂದ ಆಕರ್ಷಿತನಾದವ, ಗಾಂಧಿವಾದಿ ಜೊತೆಗೆ ಹಿಂದುತ್ವವೂ ಇದೆ ಎಂದು ಹೇಳಿಕೆ ನೀಡಿದಾಗ ಕುಮಾರಸ್ವಾಮಿ ಕೂತಲ್ಲಿಂದಲೇ ಶ್ರೀಗಳಿಗೆ ಪ್ರಣಾಮ ಸಲ್ಲಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications