ಭ್ರಷ್ಟರು ಮಂತ್ರಿಮಂಡಲದಲ್ಲಿ ಇರಲೇಬಾರದು

ಭಾರದ್ವಾಜ್ ಅವರು ಮಂಗಳವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ವಿವರ ನೀಡಿದರು. ಅವರು ಬುಧವಾರ ಕೇಂದ್ರ ಗೃಹಸಚಿವ ಪಿ ಚಿದಂಬರಂ ಅವರನ್ನೂ ಭೇಟಿ ಮಾಡಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕೇಂದ್ರ ಮಧ್ಯ ಪ್ರವೇಶಿಸಬೇಕೆಂದು ಮನವಿ ಮಾಡಲಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯ ಬೊಕ್ಕಸದಿಂದಲೇ ಇವರು ಸಂಬಳ ಪಡೆಯುತ್ತಿರುವಾಗ ಇಂಥ ಕೆಲಸಕ್ಕೆ ಕೈಹಾಕಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರು ಮಂತ್ರಿಯಾಗಿ ಮುಂದುವರಿಯುವುದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿರುವ ಭಾರದ್ವಾಜ್, ರೆಡ್ಡಿ ಸಹೋದರರ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದರು. ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐನಿಂದ ತನಿಖೆ ಆಗಲೇಬೇಕು ಎಂದು ಹೇಳಿದರು.
ಒಂದಾಗ ಬದ್ಧ ವೈರಿಗಳು : ಅಕ್ರಮ ಗಣಿಗಾರಿಕೆ ಮತ್ತು ವಿಧಾನಸಭೆಯಲ್ಲಿ ನಡೆದ ಜಂಗಿ ಕುಸ್ತಿಯ ವಿರುದ್ಧ ತೋಳೇರಿಸಿರುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಇಂದು ಅನಿರೀಕ್ಷಿತ ಕಾದಿತ್ತು. ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆ ಆಗಲೇಬೇಕು ಮತ್ತು ಗೂಂಡಾಗಿರಿ ನಡೆಸುತ್ತಿರುವ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಪಟ್ಟುಹಿಡಿದಿರುವ ಮತ್ತು ಅಹೋರಾತ್ರಿ ಧರಣಿ ನಡೆಸುತ್ತಿರುವ ಸಿದ್ದರಾಮಯ್ಯನವರಿಗೆ ಬದ್ಧ ವೈರಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಬೆಂಬಲ ಸೂಚಿಸಿದ್ದಾರೆ.
ವಿಧಾನಸಭೆಗೆ ಖುದ್ದಾಗಿ ಆಗಮಿಸಿದ ದೇವೇಗೌಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ನೀಡಿ, ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
ಬಿಜೆಪಿ ತಿರುಗೇಟು : ರಾಜ್ಯ ಸರಕಾರದ ಸ್ಥಿರತೆ ಕಾಪಾಡಬೇಕಾದ ರಾಜ್ಯಪಾಲರೇ ಬಿಜೆಪಿ ಸರಕಾರವನ್ನು ಅಸ್ಥಿರ ಮಾಡಲು ಯತ್ನಿಸುತ್ತಿದ್ದಾರೆ. ಸಾಂವಿಧಾನಿಕ ಹುದ್ದೆಯನ್ನು ಮರೆತು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರನ್ನು ನಿಯಂತ್ರಿಸುವಂತೆ ರಾಷ್ಟ್ರಪತಿಗೆ ಮನವಿ ಮಾಡುವುದಾಗಿ ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅಕ್ರಮ ಗಣಿಗಾರಿಕೆ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿ ವಿರೋಧ ಪಕ್ಷದವರು ಸದನದ ಪಾವಿತ್ರ್ಯತೆಯನ್ನು ಹಾಳುಗೆಡವಿದ್ದಾರೆ. ವಿರೋಧ ಪಕ್ಷದವರಿಗೆ ಕೂತು ಚರ್ಚಿಸಲು ಆಸಕ್ತಿಯೇ ಇಲ್ಲ. ಚರ್ಚೆಗೆ ನಾನು ರೆಡಿ. ಸಿಬಿಐ ತನಿಖೆಯಂತೂ ಸಾಧ್ಯವೇ ಇಲ್ಲ, ಆ ಪ್ರಶ್ನೆ ಉದ್ಭವಿಸುವೂ ಇಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications