Get Updates
Get notified of breaking news, exclusive insights, and must-see stories!

ಪ್ರಧಾನಿ ಬಳಿಗೆ ಬೆಳಗಾವಿ ವಿವಾದ ಒಯ್ದ ಮಹಾ ಸಿಎಂ

Maha CM Ashok Chavan
ಮುಂಬೈ, ಜು.14: ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳು ಕೈಗೆ ಸಿಗುವುದಿಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆಯೇ ಮತ್ತೊಂದು ಹೊಸ ತಂಟೆ ತೆಗೆದಿರುವ ಮಹಾರಾಷ್ಟ್ರ , ಗಡಿ ವಿವಾದವನ್ನು ಸುಪ್ರೀಂಕೋರ್ಟ್ ಇತ್ಯರ್ಥಗೊಳಿಸುವವರೆಗೂ ಕರ್ನಾಟಕ ದಲ್ಲಿರುವ 865 ಮರಾಠಿ ಭಾಷಿಕ ಗ್ರಾಮಗಳನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ.

ಗಡಿ ವಿವಾದ ಕುರಿತು ನಿರ್ಧಾರ ಕೈಗೊಳ್ಳುವ ಸಂಬಂಧ ಹಾಗೂ ಮರಾಠಿ ಭಾಷಿಕ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಬೇಕೆಂಬ ಕುರಿತು ಬುಧವಾರ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.

ಮಹಾ ಸಿಎಂ ಅಶೋಕ್ ಚವಾಣ್ ಅವರ ನೇತೃತ್ವದ 30 ಮಂದಿಯ ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಛಗುನ್ ಭುಜ್ ಬಲ್, ಎನ್ ಸಿ ಪಿಯ ಮಧುಕರ್ ಪಿಛಡ್, ಶಿವಸೇನಾದ ಸುಭಾಷ್ ದೇಸಾಯಿ, ಪಿಡಬ್ಲ್ಯುಪಿ ನಾಯಕ ಎನ್ ಡಿ ಪಾಟೀಲ್, ಬಿಜೆಪಿಯ ಪಾಂಡುರಂಗ್ ಫುಂಡ್ಕರ್ , ಎಂಎನ್ ಎಸ್ ಶಾಸಕ ನಂದಗೋಂವಕರ್ ಹಾಗೂ ಎಸ್ಪಿಯ ಅಬು ಆಜ್ಮಿ ಮುಂತಾದವರು ಇದ್ದಾರೆ.

ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಇತ್ಯರ್ಥವಾಗುವವರೆಗೂ ಬೇರೆ ಪರಿಹಾರವೇ ಇಲ್ಲ. ಹೀಗಾಗಿ ಕರ್ನಾಟಕದಲ್ಲಿರುವ 865 ಮರಾಠಿ ಭಾಷಿಕ ಗ್ರಾಮಗಳನ್ನು ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವವರೆಗೆ ಕೇಂದ್ರಾಡಳಿತ ಪ್ರದೇಶಗಳಿಗೆ ಒಳಪಡಿಸಿ ಆದೇಶ ಹೊರಡಿಸಬೇಕೆಂಬ ಅನಿವಾರ್ಯತೆಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡುವುದಾಗಿ ಚೌಹಾಣ್ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+