ಹಂತಕಿ ಶುಭಾ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಶುಭಾ ತನ್ನ ಪ್ರಿಯಕರ ಅರುಣ್ ನನ್ನು ವರಿಸಬೇಕಿದ್ದರೆ, ನಿಶ್ಚಿತಾರ್ಥ ನಂತರ ಭಾವಿಪತಿಗೆ ನನಗೆ ನೀವು ಇಷ್ಟವಿಲ್ಲ. ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಒಂದು ಮಾತು ಹೇಳಿದ್ದರೆ ಸಾಕಿತ್ತು. ಅಷ್ಟು ಸಲಿಗೆ ಶುಭಾ ಹಾಗೂ ಗಿರೀಶ್ ಮಧ್ಯೆ ಇತ್ತು. ಚಿಕ್ಕಂದಿನಿಂದ ಪರಸ್ಪರ ಪರಿಚಯವಿದ್ದಿದ್ದರಿಂದ ಶುಭಾಳ ಕೋರಿಕೆಗೆ ಸರಳ ಸ್ವಭಾವ ಗಿರೀಶ್ ಕೂಡಾ ಒಪ್ಪಿರುತ್ತಿದ್ದ.
ಆದರೆ, ದುಡುಕು ಸ್ವಭಾವ, ಕುರುಡು ಪ್ರೇಮದಲ್ಲಿ ಸಿಲುಕಿದ್ದ ಶುಭಾ, ನಿರ್ದೋಷಿ ಟೆಕ್ಕಿ ಗಿರೀಶ್ ಹತ್ಯೆ ಮಾಡಿಸಿ ಬಿಟ್ಟಳು. ಆಕೆ ಹಾಗೂ ಆಕೆಯ ಸಹಚರರು ಮಾಡಿದ ತಪ್ಪಿಗೆ ಇಂದು ಶಿಕ್ಷೆ ಪ್ರಕಟವಾಗಿದೆ. ಭಾರತೀಯ ದಂಡ ಸಂಹಿತೆ 301,320 ಹಾಗೂ 201 ರ ಅನ್ವಯ ಆರೋಪಿಗಳಿಗಳಿಗೆ ನ್ಯಾಯಾಧೀಶ ಒಂಟಿಗೋಡಿ ಅವರು ಶಿಕ್ಷೆ ಆದೇಶ ನೀಡಿದರು.
ನಿವೃತ್ತ ಯೋಧ ಥಾಮಸ್ ಸೇರಿದಂತೆ ಇಬ್ಬರ ಪ್ರತ್ಯಕ್ಷ ಸಾಕ್ಷಿ. ಶುಭಾ ಹಾಗೂ ಅರುಣ್ ನಡುವೆ ನಡೆದ ಮೊಬೈಲ್ ಸಂಭಾಷಣೆ, ಕೊಲೆಗೆ ಬಳಸಲಾದ ಕಬ್ಬಿಣದ ರಾಡ್ ಸಾಕ್ಷಿಯಾಗಿ ಪರಿಗಣಿಸಲಾಗಿದೆ ಎಂದು ತನಿಖಾಧಿಕಾರಿ ದಾವೂದ್ ಖಾನ್ ಹೇಳಿದರು.
ಶಿಕ್ಷೆ ಪ್ರಮಾಣ : ಅರುಣ ವರ್ಮಾಹಾಗೂ ದಿನೇಶ್ ಗೆ 50 ಸಾವಿರ ದಂಡ, ವೆಂಕಟೇಶ್ ಗೆ 1ಲಕ್ಷ ರು ದಂಡ, ಶುಭಾಳನ್ನು ನಾಲ್ಕನೆ ಅಪರಾಧಿಯಾಗಿ ಪರಿಗಣಿಸಲಾಗಿದ್ದು 75 ಸಾವಿರ ರು ದಂಡ ವಿಧಿಸಲಾಗಿದೆ. ನಾಲ್ವರಿಗೂ ಜೀವಾವಧಿ ಶಿಕ್ಷೆ ನೀಡಲಾಗಿದೆ. ಶುಭಾಳಿಗೆ ಮಾತ್ರ ಹೆಚ್ಚುವರಿ 3 ವರ್ಷ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಬುದ್ಧಿಯ ಸಿವಿಲ್ ವಕೀಲೆ ಶುಭಾ, ಈವರೆಗೂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಿಲ್ಲ. ಅಂದು ಮೊದಲ ಬಾರಿ ಬಂಧನಕ್ಕೊಳಗಾಗದ ಕೊಟ್ಟದ್ದು ಒಂದೇ ಉತ್ತರ 'ನೋ ಕಾಮೆಂಟ್ಸ್'. ಅಷ್ಟೇ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications