ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಲ್ಪಸಂಖ್ಯಾತರ ಹೊಟ್ಟೆಗೆ ಹೊಡೆದ ಸರ್ಕಾರ: ಮೋಟಮ್ಮ

By Mahesh
|
Google Oneindia Kannada News

Motamma Opposes Anti Cow Slaughter Bill
ಬೆಂಗಳೂರು, ಜು.16: ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತರುವ ಮೂಲಕ ಬಿಜೆಪಿ ಸರ್ಕಾರ ಜನರ ಆಹಾರ ಪದ್ಧತಿಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕಿ ಮೋಟಮ್ಮ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗಣಿ ಲೂಟಿ ತಡೆದು ನೈಸರ್ಗಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕೆಲಸ ಮಾಡುವ ಬದಲಿಗೆಜನರಿಗೆ ಬೇಡವಾದ ವಿಧೇಯಕ ಜಾರಿಗೆ ತಂದಿದೆ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಗೋಹತ್ಯೆ ನಿಷೇಧ ಕಾಯಿದೆಯಿಂದ ಸಮಾಜ ಒಡೆದು ಚೂರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಹಿಂದುತ್ವದ ಹಿಡನ್ ಅಜೆಂಡಾವನ್ನು ಬಿಜೆಪಿ ಸರ್ಕಾರ ಈ ಕಾಯಿದೆ ಮೂಲಕ ಜಾರಿಗೆ ತಂದಿದೆ. ಅಲ್ಪಸಂಖ್ಯಾತರ ಆಹಾರವನ್ನು ಕಸಿದುಕೊಂಡಿದೆ ಎಂದು ಹೇಳಿದರು.

ನಾಡಿನ ಸಾಹಿತಿಗಳು, ಬುದ್ಧಿಜೀವಿಗಳು ಗೋಹತ್ಯೆ ನಿಷೇಧ ಕಾಯಿದೆಗೆ ವಿರೋಧ ವ್ಯಕ್ತಪಡಿಸಿದ್ದರೂ ಇದಾವುದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಈ ಕರಾಳ ಕಾಯಿದೆ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು, ಈ ಕಾಯಿದೆ ವಿರೋಧಿಸಿ ಮುಂದಿನ ಹೋರಾಟದ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X