ಅಧಿಕಾರಿಗಳು ತೋಡಿದ ಹಳ್ಳಕ್ಕೆ ಬಿದ್ದ ಯಡ್ಡಿ

ಜಾಲಪ್ಪ ಅವರ ಅಳಿಯ ಮತ್ತು ದೇಶಪಾಂಡೆ ಅವರ ಮಗ ಗಣಿಗಾರಿಕೆಗೆ ಅರ್ಜಿ ಹಾಕಿದ್ದರು. ಆದರೆ, ಅವರಿಗೆ ಅನುಮತಿ ಸಿಕ್ಕಿಲ್ಲ. ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ವಿಧಾನ ಪರಿಷತ್ ನಲ್ಲಿ ಸುಳ್ಳು ಹೇಳಿಸಿದ್ದಾರೆ ಎಂದು ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. ಬುಧವಾರ ರಾತ್ರಿ ಜಾಲಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕ್ಷಮಿಸಿಬಿಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ಈಗ ಮಾಧ್ಯಮಗಳ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೋರುತ್ತಿದ್ದೇನೆ ಎಂದರು.
ಎಸ್ ಎಂ ಕೃಷ್ಣ ಅಧಿಕಾರ ಅವಧಿಯಿಂದ ಇಲ್ಲಿಯವರೆಗೆ ಯಾರೆಲ್ಲಾ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎನ್ನುವ ವಿವರಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಸುಳ್ಳು ಆರೋಪಕ್ಕೆ ಸಂಬಂಧಿಸಿದಂತೆ ಜಾಲಪ್ಪ ಮತ್ತು ದೇಶಪಾಂಡೆ ಇಬ್ಬರೂ ಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು.












Click it and Unblock the Notifications