ಠುಸ್ ಎಂದ ಎಂಇಎಸ್ ಬೆಳಗಾವಿ ಬಂದ್

ರಜಾ ದಿನವಾಗಿದ್ದರಿಂದ ಸರಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು ಮುಚ್ಚಿದ್ದವು. ಬಂದ್ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುವಲ್ಲಿ ವಿಫಲಗೊಂಡಿತು. ಈ ಮೂಲಕ ಎಂಇಎಸ್ ಪುಂಡರಿಗೆ ಭಾರಿ ಮುಖಭಂಗವಾಗಿದೆ.
ವಾಹನ ಸಂಚಾರ ಸುಗಮ: ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಖಡೇಬಜಾರ್, ಕಾಲೇಜು ರಸ್ತೆ, ಮಾರ್ಕೆಟ್ ಪ್ರದೇಶದಲ್ಲಿ ಕೆಲ ಅಂಗಡಿ ಮುಂಗಟ್ಟು ಮುಚ್ಚಿದ್ದನ್ನು ಹೊರತುಪಡಿಸಿದರೆ ಇತರೆಡೆ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿತ್ತು. ಕೆಲವು ಪ್ರದೇಶಗಳಲ್ಲಿ ವ್ಯಾಪಾರಿಗಳು ಬಂದ್ ಭಯದಲ್ಲಿ ಅಂಗಡಿಗಳನ್ನು ಸ್ವಲ್ಪ ತಡವಾಗಿ ತೆರೆದರು. ಬಸ್, ವಾಹನ ಸಂಚಾರ ಸುಗಮವಾಗಿ ನಡೆಯಿತು. ಆಟೊ ಸಂಚಾರಕ್ಕೂ ಭಂಗ ಬರಲಿಲ್ಲ.
ನಿಷೇಧಾಜ್ಞೆ ಜಾರಿ: ಬಂದ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದ ಅನ್ವಯವಾಗುವಂತೆ ಜು. 21ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶ ಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.ಸಣ್ಣಪುಟ್ಟ ಘಟನೆ ಹೊರತುಪಡಿಸಿದರೆ ಬಂದ್ಗೆ ಭಾರಿ ಪ್ರತಿಕ್ರಿಯೆ ದೊರೆಯದೆ ಮರಾಠಿಗರಿಂದಲೇ ಎಂಇಎಸ್ ಮುಖಭಂಗಕ್ಕೆ ಒಳಗಾಗುವಂತಾಯಿತು.
ಕೆಲವು ಮರಾಠಿ ಯುವಕ ಮಂಡಳಗಳ ಬೋರ್ಡ್ಗಳಲ್ಲಿ ಜು.18ರಂದು ಬೆಳಗಾವಿ ಬಂದ್ ಎಂದು ಎಂಇಎಸ್ ಮುಂಚಿತವಾಗಿಯೇ ಕರಪತ್ರಗಳನ್ನು ಅಂಟಿಸಿತ್ತು. ಜತೆಗೆ ಮರಾಠಿ ಮಾಧ್ಯಮಗಳು ಬಂದ್ ಆಚರಿಸಬೇಕು ಎಂದು ಕರೆ ನೀಡಿದ್ದರಿಂದ ವ್ಯಾಪಾರಿಗಳು ಸಂಭವಿಸಬಹುದಾದ ಕಷ್ಟ ನಷ್ಟಕ್ಕೆ ಹೆದರಿ ಅಂಗಡಿ ತೆರೆಯದಿರುವುದು ಕಂಡು ಬಂತು.ಎಂಇಎಸ್ ಕರೆ ನೀಡಿದ್ದ ಬಂದ್ಗೆ ಹಿಂದೂಪರ ಸಂಘಟನೆಗಳು ಬೆಂಬಲ ನೀಡಿರಲಿಲ್ಲ.
ಕೇಂದ್ರ ಬಸ್ ನಿಲ್ದಾಣ ಬಳಿಯ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಚಲನಚಿತ್ರ ಪ್ರದರ್ಶನ ಎಂದಿನಂತೆ ಸಾಗಿತ್ತು. ವಿದ್ಯಾರ್ಥಿಗಳು ಕ್ರಿಕೆಟ್, ಫುಟ್ಬಾಲ್ ಆಟದಲ್ಲಿ ದಿನ ಕಳೆದು ಸಂತಸಪಟ್ಟರು. ವ್ಯಾಪಾರ ವಹಿವಾಟು ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತದೆ ಎಂದುಕೊಂಡ ಎಂಇಎಸ್ ಭಾನುವಾರದ ಬಂದ್ ಕರೆಯಿಂದ ಅವಮಾನಗೊಂಡಿದೆ.
ನಿಷೇಧಾಜ್ಞೆ ಪರಿಣಾಮವಾಗಿ ಎಂಇಎಸ್ ಪುಂಡರು ಬೀದಿಗಿಳಿದು ಪುಂಡಾಟಿಕೆ ನಡೆಸುವ ಹುಚ್ಚು ಧೈರ್ಯ ತೋರಿಸಲಿಲ್ಲ. ಸಂಜೆವರೆಗೂ ವ್ಯಾಪಾರ ವಹಿವಾಟು ಎಂದಿನಂತೆ ಸುಲಲಿತವಾಗಿ ಸಾಗಿತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications