ಠುಸ್ ಎಂದ ಎಂಇಎಸ್ ಬೆಳಗಾವಿ ಬಂದ್

ರಜಾ ದಿನವಾಗಿದ್ದರಿಂದ ಸರಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು ಮುಚ್ಚಿದ್ದವು. ಬಂದ್ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುವಲ್ಲಿ ವಿಫಲಗೊಂಡಿತು. ಈ ಮೂಲಕ ಎಂಇಎಸ್ ಪುಂಡರಿಗೆ ಭಾರಿ ಮುಖಭಂಗವಾಗಿದೆ.
ವಾಹನ ಸಂಚಾರ ಸುಗಮ: ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಖಡೇಬಜಾರ್, ಕಾಲೇಜು ರಸ್ತೆ, ಮಾರ್ಕೆಟ್ ಪ್ರದೇಶದಲ್ಲಿ ಕೆಲ ಅಂಗಡಿ ಮುಂಗಟ್ಟು ಮುಚ್ಚಿದ್ದನ್ನು ಹೊರತುಪಡಿಸಿದರೆ ಇತರೆಡೆ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿತ್ತು. ಕೆಲವು ಪ್ರದೇಶಗಳಲ್ಲಿ ವ್ಯಾಪಾರಿಗಳು ಬಂದ್ ಭಯದಲ್ಲಿ ಅಂಗಡಿಗಳನ್ನು ಸ್ವಲ್ಪ ತಡವಾಗಿ ತೆರೆದರು. ಬಸ್, ವಾಹನ ಸಂಚಾರ ಸುಗಮವಾಗಿ ನಡೆಯಿತು. ಆಟೊ ಸಂಚಾರಕ್ಕೂ ಭಂಗ ಬರಲಿಲ್ಲ.
ನಿಷೇಧಾಜ್ಞೆ ಜಾರಿ: ಬಂದ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದ ಅನ್ವಯವಾಗುವಂತೆ ಜು. 21ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶ ಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.ಸಣ್ಣಪುಟ್ಟ ಘಟನೆ ಹೊರತುಪಡಿಸಿದರೆ ಬಂದ್ಗೆ ಭಾರಿ ಪ್ರತಿಕ್ರಿಯೆ ದೊರೆಯದೆ ಮರಾಠಿಗರಿಂದಲೇ ಎಂಇಎಸ್ ಮುಖಭಂಗಕ್ಕೆ ಒಳಗಾಗುವಂತಾಯಿತು.
ಕೆಲವು ಮರಾಠಿ ಯುವಕ ಮಂಡಳಗಳ ಬೋರ್ಡ್ಗಳಲ್ಲಿ ಜು.18ರಂದು ಬೆಳಗಾವಿ ಬಂದ್ ಎಂದು ಎಂಇಎಸ್ ಮುಂಚಿತವಾಗಿಯೇ ಕರಪತ್ರಗಳನ್ನು ಅಂಟಿಸಿತ್ತು. ಜತೆಗೆ ಮರಾಠಿ ಮಾಧ್ಯಮಗಳು ಬಂದ್ ಆಚರಿಸಬೇಕು ಎಂದು ಕರೆ ನೀಡಿದ್ದರಿಂದ ವ್ಯಾಪಾರಿಗಳು ಸಂಭವಿಸಬಹುದಾದ ಕಷ್ಟ ನಷ್ಟಕ್ಕೆ ಹೆದರಿ ಅಂಗಡಿ ತೆರೆಯದಿರುವುದು ಕಂಡು ಬಂತು.ಎಂಇಎಸ್ ಕರೆ ನೀಡಿದ್ದ ಬಂದ್ಗೆ ಹಿಂದೂಪರ ಸಂಘಟನೆಗಳು ಬೆಂಬಲ ನೀಡಿರಲಿಲ್ಲ.
ಕೇಂದ್ರ ಬಸ್ ನಿಲ್ದಾಣ ಬಳಿಯ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಚಲನಚಿತ್ರ ಪ್ರದರ್ಶನ ಎಂದಿನಂತೆ ಸಾಗಿತ್ತು. ವಿದ್ಯಾರ್ಥಿಗಳು ಕ್ರಿಕೆಟ್, ಫುಟ್ಬಾಲ್ ಆಟದಲ್ಲಿ ದಿನ ಕಳೆದು ಸಂತಸಪಟ್ಟರು. ವ್ಯಾಪಾರ ವಹಿವಾಟು ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತದೆ ಎಂದುಕೊಂಡ ಎಂಇಎಸ್ ಭಾನುವಾರದ ಬಂದ್ ಕರೆಯಿಂದ ಅವಮಾನಗೊಂಡಿದೆ.
ನಿಷೇಧಾಜ್ಞೆ ಪರಿಣಾಮವಾಗಿ ಎಂಇಎಸ್ ಪುಂಡರು ಬೀದಿಗಿಳಿದು ಪುಂಡಾಟಿಕೆ ನಡೆಸುವ ಹುಚ್ಚು ಧೈರ್ಯ ತೋರಿಸಲಿಲ್ಲ. ಸಂಜೆವರೆಗೂ ವ್ಯಾಪಾರ ವಹಿವಾಟು ಎಂದಿನಂತೆ ಸುಲಲಿತವಾಗಿ ಸಾಗಿತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications