ಕಂದಾಯ ನಿರೀಕ್ಷಕನ ಬರ್ಬರ ಹತ್ಯೆ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇರುವ ಪೆಟ್ರೋಲ್ ಪಂಪ್ ಬಳಿ ಕಾರು ಶನಿವಾರ ಮಧ್ಯಾಹ್ನದಿಂದಲೇ ನಿಂತಿತ್ತು. ಮಾಹಿತಿ ಆಧರಿಸಿ ಪೊಲೀಸರು ತಪಾಸಣೆ ನಡೆಸಿದಾಗ ಕೊಲೆ ಆಗಿರುವುದು ಪತ್ತೆಯಾಗಿದೆ. ಕೈಕಾಲುಗಳನ್ನು ಕಟ್ಟಿ ಹಾಕಲಾಗಿದೆ. ಇದು ಕೊಲೆ ಪ್ರಕರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಯಾವುದೇ ಹೆಚ್ಚುವರಿ ಮಾಹಿತಿ ಲಭ್ಯವಾಗಿಲ್ಲ.
ತನಿಖೆ ಆರಂಭವಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.











Click it and Unblock the Notifications