ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೋಹತ್ಯೆ ನಿಷೇಧ ವಿರೋಧಿ ಗೌಡ್ರ ಪ್ರತಿಕೃತಿ ದಹನ
ಬಳ್ಳಾರಿ ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಸೋಮವಾರ ಬೆಳಗ್ಗೆ ಸಭೆ ಸೇರಿದ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಎಚ್.ಡಿ. ದೇವೇಗೌಡರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮತ್ತು ಪ್ರತಿಕೃತಿಯನ್ನು ದಹನ ಮಾಡಿದರು.
ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಡಿ. ಅನಿಲ್ನಾಯ್ಡು ಈ ಸಭೆಯ ನೇತೃತ್ವವಹಿಸಿ ಮಾತನಾಡಿ, ಗೋಸಂರಕ್ಷಣೆ ಮಸೂದೆಯನ್ನು ಕಾಯಿದೆಯಾಗಿ ಜಾರಿಗೆ ತರಲು ಹಿಂದೂಗಳು ಮತ್ತು ಕೃಷಿಕರ ಸಂಪೂರ್ಣ ಬೆಂಬಲ ಇದೆ. ಆದರೆ, ಕಾಂಗ್ರೆಸ್ - ಜೆಡಿಎಸ್ ರಾಜಕೀಯ ದುರುದ್ದೇಶಗಳಿಗಾಗಿ ವಿರೋಧಿಸುತ್ತಿವೆ ಎಂದು ಆರೋಪಿಸಿದರು.
ರಾಜ್ಯಪಾಲ ಹಂಸರಾಜ್ ಭಾರಧ್ವಜ್ ಅವರು ರಾಜಕಾರಣಿಗಳ ಒತ್ತಡಕ್ಕೆ ಬಲಿ ಆಗಬಾರದು. ದೇಶದ ಸಂಸ್ಕೃತಿ ಮತ್ತು ಇತಿಹಾಸದ ಸಂರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿ ಆಗಬೇಕು ಎಂದು ಅವರು ಆಗ್ರಹಿಸಿದರು.
Comments
ಗೋಹತ್ಯೆ ದೇವೇಗೌಡ ಬಳ್ಳಾರಿ ರೋಹಿಣಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಗೋಹತ್ಯೆ ನಿಷೇಧ ಕಾಯ್ದೆ cow slaughter ban bill deve gowda rohini protest
Story first published: Tuesday, July 20, 2010, 17:54 [IST]