ಆಟೋ ಮೀಟರ್ ದರ ಏರಿಕೆ ಬಹುತೇಕ ಖಚಿತ?

ಪ್ರಯಾಣಿಕರು ಪ್ರಸ್ತುತ ಕನಿಷ್ಠ ದರ ರು.14 ರ ಬದಲಿಗೆ 18 ರು. ಕೊಟ್ಟು ಸುತ್ತಾಡಬೇಕು. ಪೆಟ್ರೋಲ್ ಬೆಲೆ ಏರಿಕೆ, ಐದು ವರ್ಷಗಳಿಂದ ಕನಿಷ್ಠ ಪ್ರಯಾಣದರ ಏರಿಕೆಯಾಗದಿರುವುದರಿಂದ ಆಟೋರಿಕ್ಷಾ ಸಂಘಗಳ ಮನವಿಗೆ ಸಾರಿಗೆ ಸಚಿವ ಆರ್ ಅಶೋಕ್ ಕೂಡ ಸಮ್ಮತಿಸುವ ಸಾಧ್ಯತೆಯಿದೆ.
ಬೆಂಗಳೂರಿನ ಪ್ರಮುಖ ಆಟೋ ಸಂಘಟನೆಗಳಾದ ಆದರ್ಶ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘ, ಬಿಜೆಪಿ ಆಟೋ ಸಂಘ ಮುಂತಾದ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂಕೆ ಆಯ್ಯಪ್ಪ ಅವರನ್ನು ಜೂನ್ ತಿಂಗಳ ಕೊನೆವಾರದಲ್ಲಿ ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಕಳೆದ ಐದಾರು ವರ್ಷಗಳಲ್ಲಿ ಬಿಎಂಟಿಸಿ, ಕೆಎಸ್ಆರ್ ಟಿಸಿ ಸಂಸ್ಥೆಗಳು ಪ್ರಯಾಣ ದರವನ್ನು ಹಲವು ಬಾರಿ ಏರಿಸಿವೆ. ಆದರೆ, ಆಟೋ ಪ್ರಯಾಣ ದರ ಏರಿಕೆ ಕಂಡಿಲ್ಲ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆಟೋ ಕನಿಷ್ಠ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಆದರ್ಶ ಆಟೋ ಸಂಘ ಹೇಳಿದೆ.
* ಹಳೆ ದರ : ಕನಿಷ್ಠ ದರ ರು.14(ಪ್ರತಿ 2 ಕಿ.ಮೀಗೆ) ನಂತರ ಪ್ರತಿ ಕಿ.ಮೀ.ಗೆ ರು.7.
* ಹೊಸ ದರ : ರು. 18 ಅಥವಾ 20 (ಪ್ರತಿ 2 ಕಿ.ಮೀಗೆ) ನಂತರ ಪ್ರತಿ ಕಿ.ಮೀ.ಗೆ ರು.10.
ಬೆಂಗಳೂರು ನಗರವಲ್ಲದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಆಟೋದರ ಹೆಚ್ಚಳ ಮಾಡುವ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬಹುಶಃ ಈ ಬಗ್ಗೆ ಶುಕ್ರವಾರದಂದು ಅಧಿಕೃತವಾಗಿ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಈ ನಡುವೆ ಆಟೋರಿಕ್ಷಾಗೆ ಬದಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸರ್ಕಾರ ಯೋಜಿಸಿದ್ದು, ಸಿಟಿ ಟ್ಯಾಕ್ಸಿಗಳ ರೂಪದಲ್ಲಿ ನ್ಯಾನೋ ಕಾರುಗಳನ್ನು ಬಳಸಲು ನಿರ್ಧರಿಸಲಾಗಿದೆ. ಈ ಯೋಜನೆ ಇನ್ನೂ ಸಾರಿಗೆ ಸಚಿವ ಮೇಜಿನ ಕಡತದಲ್ಲೇ ಇದೆ. ನಾಳೆ ಆಟೋ ಸಂಘಟನೆಗಳ ಜೊತೆ ಜಿಲ್ಲಾಧಿಕಾರಿ ಅಯ್ಯಪ್ಪ ಅವರು ಸಭೆ ನಡೆಸಿ ನಂತರ ನಿರ್ಧಾರ ಪ್ರಕಟಿಸಲಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications