ಕಾಮನ್ ವೆಲ್ತ್ ಕ್ರೀಡಾಕೂಟಕ್ಕೂ ಕಾರ್ಮಿಕರ ಕೊರತೆ

ದೆಹಲಿ ನಗರ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಕೇಶ್ ಮೆಹ್ತಾ ಪ್ರಕಾರ ಕ್ರೀಡಾಕೂಟಕ್ಕೆ ಕಾರ್ಮಿಕರ ಕೊರತೆ ಶೇ.20ರಷ್ಟಿದೆ. ಅಲ್ಲದೆ ಉತ್ತಮ ಮುಂಗಾರಿನ ಕಾರಣದಿಂದ ದೆಹಲಿಗೆ ವಲಸೆ ಬಂದಿದ್ದ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಕೃಷಿ ಕೆಲಸಕ್ಕೆ ಮರಳುತ್ತಿದ್ದಾರೆ.
ರಾಜಧಾನಿ ವಲಯದಲ್ಲಿ ಕಳೆದ 18 ತಿಂಗಳಿನಲ್ಲಿ ಕಾರ್ಮಿಕರ ವೇತನ ಶೇ40 ರಿಂದ 60 ರಷ್ಟು ಹೆಚ್ಚಾಗಿದೆ. ದೆಹಲಿ ಮೂಲದ ರಿಯಲ್ ಎಸ್ಟೇಟ್ ಕಂಪೆನಿ ಸರೆ ಇಂಡಿಯಾದ ಮುಖ್ಯ ನಿರ್ವಹಣಾ ಅಧಿಕಾರಿ ವಿನೀತ್ ರೆಲಿ ಪ್ರಕಾರ ಹಣದುಬ್ಬರ ಹಾಗೂ ಆಹಾರ ಪದಾರ್ಥಗಳ ಬೆಲೆ ಹೆಚ್ಚಿರುವುದರಿಂದ ಕಾರ್ಮಿಕರ ವೇತನ ಹೆಚ್ಚಾಗಿದೆ.
ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯಿಂದಲೂ ಕಾರ್ಮಿರ ಕೊರತೆ ಹೆಚ್ಚಿದೆ ಎಂದೂ ಅವರು ಹೇಳಿದರು. ಕೌಶಲ್ಯವುಳ್ಳ ಮತ್ತು ಕೌಶಲ್ಯ ರಹಿತ ಕಾರ್ಮಿಕರಷ್ಟೇ ಅಲ್ಲದೆ ಉನ್ನತ ಮಟ್ಟದ ಹುದ್ದೆಗಳಲ್ಲಿರುವ ಅಧಿಕಾರಿಗಳೂ ಉತ್ತಮ ಅವಕಾಶದ ಹಿನ್ನೆಲೆಯಲ್ಲಿ ಟೆಲಿಕಮ್ಯುನಿಕೇಷನ್ಸ್, ಶೀಘ್ರ ಮಾರಾಟ ಗ್ರಾಹಕ ಉತ್ಪನ್ನರಂಗಕ್ಕೆ ವಲಸೆ ಹೋಗುತ್ತಿದ್ದಾರೆ
ಉದ್ಯಮಿಗಳ ಪ್ರಕಾರ ರಿಯಲ್ ಎಸ್ಟೇಟ್ ಉದ್ಯಮಕ್ಕೇ ಕಾರ್ಮಿಕರನ್ನು ತರಬೇತಿ ನೀಡುವ ಶಿಕ್ಷಣ ಸಂಸ್ಥೆಗಳು ಇಲ್ಲದ್ದರಿಂದ ನಿರ್ಮಾಣ ರಂಗವೂ ಕಾರ್ಮಿಕರ ತೀವ್ರ ಕೊರತೆ ಎದುರಿಸುತ್ತಿದೆ. ಈಗ ಕಾರ್ಮಿಕರ ಸರಬರಾಜು ಮತ್ತು ಬೇಡಿಕೆ ಶೇ.40:50 ರ ಅನುಪಾತದಲ್ಲಿದೆ.
ರಾಜಧಾನಿಯ ಹೊರಗೆ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಹಾಗೂ ಇತರ ಬೃಹತ್ ಯೋಜನೆಗಳಿಗೆ ಕೌಶಲ್ಯವುಳ್ಳ ಕಾರ್ಮಿಕರ ಅವಶ್ಯಕತೆ ಇದ್ದು ಗುತ್ತಿಗೆದಾರರು ದೆಹಲಿಯಿಂದ ಅಲ್ಲಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾರೆ.
ರಹೇಜಾ ಡೆವಲಪರ್ಸ್ ನ ವ್ಯವಸ್ಥಾಪಕ ನಿರ್ದೇಶಕ ನವೀನ್ ರಹೇಜಾ ಪ್ರಕಾರ ಕೆಲಸಗಾರರನ್ನು ಉಳಿಸಿಕೊಳ್ಳಲು ಉದ್ಯಮಿಗಳು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಆಹಾರ ಹಾಗೂ ಮಕ್ಕಳಿಗೆ ಬಾಲವಾಡಿ ಸೌಕರ್ಯ ಒದಗಿಸಲು ಮುಂದಾಗಬೇಕಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications