ರೆಡ್ಡಿ ಬಣಕ್ಕೆ ಗುಡ್ ಬೈ : ಯಡ್ಡಿ ಬಣಕ್ಕೆ ಜೈಜೈ

ಹಿಂದೆ ಮಾಡಿದ ತಪ್ಪನ್ನು ಇನ್ನೆಂದೂ ಮಾಡುವುದಿಲ್ಲ. ಬಳ್ಳಾರಿ ಸಚಿವತ್ರಯರು ನಡೆಸುತ್ತಿರುವ ಬಳ್ಳಾರಿಯಿಂದ ಮೈಸೂರುವರೆಗಿನ ಪಾದಯಾತ್ರೆಯನ್ನು ಬೆಂಬಲಿಸುವುದಿಲ್ಲ ಎಂದು ಸಚಿವ ರೇಣುಕಾಚಾರ್ಯ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ರಾಜು ಕಾಗೆ, ಬಿಪಿ ಹರೀಶ್ ಮತ್ತು ಕಿರಣ್ ಕುಮಾರ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಚಿವರಾದ ಶ್ರೀರಾಮುಲು ಮತ್ತು ಜನಾರ್ದನರೆಡ್ಡಿ ಪಾದಯಾತ್ರೆಯನ್ನು ಘೋಷಿಸುವ ಮೊದಲು ಯಾರೊಂದಿಗೂ ಚರ್ಚಿಸಿಲ್ಲ. ಅದು ಪಕ್ಷಕ್ಕೆ ಸಂಬಂಧಿಸಿದ ವಿಷಯವಲ್ಲ. ಹೀಗಾಗಿ ನಮ್ಮ ಬೆಂಬಲವಿಲ್ಲ. ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ. ಒಂದು ವೇಳೆ ಅವರೇನಾದರೂ ಪಾದಯಾತ್ರೆ ಮಾಡೋಣ ಎಂದರೆ ಬೆಂಬಲಿಸುತ್ತೇವೆ ಎಂದರು.
ಸಚಿವ ಸ್ಥಾನ ಸಿಕ್ಕ ಬಳಿಕ ರೆಡ್ಡಿ ಬಣದಿಂದ ದೂರ ಸರಿದಿದ್ದೇನೆ ಎಂಬುದು ಸರಿಯಲ್ಲ. ಸಂಪುಟ ಸೇರುವ ಎಲ್ಲ ಅರ್ಹತೆ ನನ್ನಲ್ಲಿದೆ. ಆ ಕಾರಣದಿಂದಲೇ ಯಡಿಯೂರಪ್ಪ ಅವಕಾಶ ನೀಡಿದ್ದಾರೆ. ಶಾಸಕ ಮಿತ್ರರಿಗೂ ಅವಕಾಶ ಸಿಗಬೇಕು ಎಂಬ ಆಸೆ ಇದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications