ಬಸವನಗುಡಿಯಲ್ಲಿ ಮತ್ತೆ ಪುಸ್ತಕ ಪರಿಷೆ

ಇಂತಹ ಯೋಜನೆಯು ಸಾಕಾರಗೊಳ್ಳಲು ಸಾರ್ವಜನಿಕರು, ಆಸಕ್ತರು, ಗಣ್ಯರು, ಪತ್ರಕರ್ತರು, ಸಾಹಿತಿಗಳು ತಾವು ಓದಿ ಮುಗಿಸಿದ ಪುಸ್ತಕಗಳು ಇತರರಿಗೆ ಉಪಯುಕ್ತವಾಗಬಲ್ಲ ಪುಸ್ತಕಗಳನ್ನು ಪರಿಷೆಯ ಭಂಡಾರಕ್ಕೆ ಅರ್ಪಿಸಬಹುದು.
ಪುಸ್ತಕ ಪರಿಷೆಯು ಬಸವನಗುಡಿಯ ಸೃಷ್ಟಿ ವೆಂಚರ್ಸ್ ನ ವಿನೂತನ ಪರಿಕಲ್ಪನೆಗಳಲ್ಲೊಂದು 'ಸಮಾಜ ವಿಕಾಸದ ಶಕ್ತಿ ಕೇಂದ್ರಗಳಾದ ಪುಸ್ತಕಗಳು ನಿಂತ ನೀರಿನಂತೆ ಒಂದೆಡೆ ಇರದೆ ಹಸ್ತದಿಂದ ಹಸ್ತಕ್ಕೆ, ಮಸ್ತಕದಿಂದ ಮಸ್ತಕಕ್ಕೆ ಸಂಚರಿಸಿ ತಮ್ಮ ಇರುವಿಕೆಯ ಸಾರ್ಥಕತೆಯನ್ನು ಸಾಧಿಸಬೇಕು" ಎಂಬ ಚಿಂತನೆಯಡಿಯಲ್ಲಿ “ಮೇಳಕ್ಕೆ ಬರುವವರಿಗೆ ಒಂದು ಪುಸ್ತಕ ಉಚಿತವಾಗಿ ತಮ್ಮಿಂದಷ್ಟು ಪುಸ್ತಕಗಳು ಮೇಳಕ್ಕಾಗಿ ಸಂಗ್ರಹಿಸಿ ವಿತರಿಸುವ ಯೋಜನೆ ರೂಪಿಸಿದೆ.
ಮೊದಲ ಬಾರಿಗೆ ಜನವರಿ 17 ರಂದು ಅಯೋಜಿಸಿತ್ತು. ಈ ಮೊದಲ ಪುಸ್ತಕ ಪರಿಷೆಗೆ ಸಾಹಿತಿಗಳು, ಮಾಧ್ಯಮದವರು,ಗಣ್ಯರು, ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ,ಮೆಚ್ಚುಗೆ ವ್ಯಕ್ತವಾಗಿತ್ತು. ಸಾರ್ವಜನಿಕರ ಹಾಗೂ ಪುಸ್ತಕಾಭಿಮಾನಿಗಳ ಕೋರಿಕೆಯ ಮೇರೆಗೆ ಸೃಷ್ಟಿ ವೆಂಚರ್ಸ್ ಮತ್ತೊಮ್ಮೆ ಈ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಈಬಾರಿಯು ಕೂಡ ಹೆಚ್ಚು ಹೆಚ್ಚು ಮಕ್ಕಳು, ಯುವಕರು ಹಾಗೂ ವಿಧ್ಯಾರ್ಥಿಗಳಿಗೆ ಪುಸ್ತಕ ಪರಿಷೆಯ ಪ್ರಯೋಜನ ಪಡೆಯುವಂತೆ ಆದ್ಯತೆ ನೀಡಲಾಗಿದೆ.
ಕನ್ನಡಿಗರಲ್ಲಿ ಪುಸ್ತಕ ಪ್ರೀತಿ ಹೆಚ್ಚಿಸುವ ಹಾಗೂ ಪುಸ್ತಕ ಜಾಗೃತಿಯ ಪ್ರಾಮಾಣಿಕ ಕಾಳಜಿ ಹೊಂದಿರುವ ಮತ್ತು ಜನರಿಂದ ಜನರಿಗಾಗಿಯೇ ನಡೆಯಲ್ಪಡುವ ಈ ಪುಸ್ತಕ ಪರಿಷೆಗೆ ಸಾರ್ವಜನಿಕರು ತಮ್ಮ ಸಂಗ್ರಹದ ತಾವು ಓದಿ ಮುಗಿಸಿದ ಪುಸ್ತಕಗಳನ್ನು ತಲುಪಿಸಬಹುದು. ಜುಲೈ 25 ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ.
ಪುಸ್ತಕಗಳನ್ನು ತಲುಪಿಸುವ ವಿಳಾಸ:
“ಸೃಷ್ಟಿ ವೆಂಚರ್ಸ್"
ನಂ. 81 ,ಈ.ಏ.ಟಿ ರಸ್ತೆ,
(ಪುಳಿಯೋಗರೆ ಪಾಯಿಂಟ್ ಮೇಲೆ)
ಬಸವನಗುಡಿ, ಬೆಂಗಳೂರು-560004
9945003479, 9448171069, 9900439930.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications