ಇದು ಕಾಂಗ್ರೆಸ್ ಪಕ್ಷದ ಅಂತಿಮ ಯಾತ್ರೆ: ರೆಡ್ಡಿ

ಬಳ್ಳಾರಿಯಲ್ಲಿ ಎಸ್ಸಿ - ಎಸ್ಟಿ ಮೆಟ್ರಿಕ್ ಬಾಲಕರ ವಸತಿನಿಯಲವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಧೂಳೀಪಟ ಆಗಿದೆ. ಪಕ್ಷ ತನ್ನ ಅಸ್ತಿತ್ವ ಮತ್ತು ನೆಲೆಯನ್ನು ಪಡೆಯಲಿಕ್ಕಾಗಿಯೇ ಈ ಯಾತ್ರೆಯನ್ನು ನಡೆಸುತ್ತಿದೆ. ಇದೇ ಆ ಪಕ್ಷದ ಕೊನೆಯ ಯಾತ್ರೆ ಎಂದರು.
ನಾವು ಯಾವ ಯಾತ್ರೆಗೂ ಅಡ್ಡಿಪಡಿಸುವುದಿಲ್ಲ. ಗಲಾಟೆಯನ್ನು ಮಾಡುವುದಿಲ್ಲ. ನಾವು ಬಳ್ಳಾರಿಯವರು. ಶಾಂತಿ ಸೌಹಾರ್ದತೆ ನಮ್ಮ ಸಂಸ್ಕೃತಿ. ಅತಿಥಿದೇವೋ ಭವಃ ನಮ್ಮ ಸಂಸ್ಕಾರ. ಕಾಂಗ್ರೆಸ್ಸಿಗರು ಅನಗತ್ಯವಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಕ್ರೈಂ ಕಡಿಮೆ ಆಗಿದೆ. ಎಲ್ಲಾ ಹಂತದ ಚುನಾವಣೆಗಳು ಶಾಂತಿಯುತವಾಗಿ ನಡೆದಿವೆ. ಕಾಂಗ್ರೆಸ್ಸಿಗರೇ ಅನಗತ್ಯವಾಗಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ಅಭಿವೃದ್ಧಿ ಇಲ್ಲಿ ಆಡಳಿತದ ನಿತ್ಯದ ಮಂತ್ರವಾಗಿದೆ ಎಂದರು.
***
ನನ್ನ ತೇಜೋವಧೆಯನ್ನು ನಿಲ್ಲಿಸಿ: ಶ್ರೀರಾಮುಲು
'ನನ್ನ ತೇಜೋವಧೆಯನ್ನು ನಿಲ್ಲಿಸಿ. ನೀವು ನನ್ನ ಬಗ್ಗೆ ಅನಗತ್ಯವಾಗಿ ಬರೆಯುತ್ತಿದ್ದೀರಿ. ನಾನು ಜನಪರ ವ್ಯಕ್ತಿ. ಜನನಾಯಕ. ನನ್ನ ಚಾರಿತ್ರ್ಯವನ್ನು ಹಾಳು ಮಾಡಬೇಡಿ' ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಪತ್ರಕರ್ತರಲ್ಲಿ ಮನವಿ ಮಾಡಿಕೊಂಡ ಅಪರೂಪದ ಘಟನೆ ಭಾನುವಾರ ನಡೆಯಿತು.
ನಾನು ಯಾರು? ಎಲ್ಲಿಂದ ಬಂದೆ? ಹೇಗೆ ಈ ಹಂತಕ್ಕೆ ಬೆಳೆದುಬಂದೆ? ಎನ್ನುವ ಪ್ರಶ್ನೆಗಳಿಗೆ ಈಗ ಉತ್ತರ ಹುಡುಕುವ ಅಗತ್ಯವೇ ಇಲ್ಲ. ನಾನು ಮತ್ತು ನನ್ನ ಬಗ್ಗೆ ಜಿಲ್ಲೆಯ ಜನತೆಗೆ ಉತ್ತಮ ಮಾಹಿತಿ ಇದೆ. ನನ್ನ ರಾಜಕೀಯ ಜೀವನದ ಸ್ಪಷ್ಟ ಚಿತ್ರಣ ಜನರಲ್ಲಿ ಇದೆ. ನೀವು ನನ್ನ ತೇಜೋವಧೆ ಮಾಡಬೇಡಿ ಪ್ಲೀಸ್ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications