ಹರಿ ನಿಧನಕ್ಕೆ ಸಂತಾಪಗಳ ಸುರಿಮಳೆ

ಸಾಹಿತಿ, ಪತ್ರಕರ್ತ ಮತ್ತು ಕನ್ನಡ ನುಡಿ ಸೇವಕರಾಗಿದ್ದ ಹರಿಹರೇಶ್ವರ ಅವರು ಜುಲೈ 22ರಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅಮೆರಿಕಾ ಸರಕಾರದಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದ ಅವರು ಸೇವೆಯಿಂದ ನಿವೃತ್ತಿ ಪಡೆದ ನಂತರ ಭಾರತಕ್ಕೆ ಹಿಂದಿರುಗಿ ಮೈಸೂರಿನಲ್ಲಿ ವಾಸಿಸುತ್ತಿದ್ದರು.
"ಲೇಖಕ ಮತ್ತು ಅಮೆರಿಕನ್ನಡಿಗರ ಆಪ್ತಮಿತ್ರ ಹರಿಹರೇಶ್ವರ ಅವರ ಅಗಲಿಕೆಯಿಂದ ಅಮೆರಿಕದಲ್ಲಿ ಕನ್ನಡ ಬಡವಾಯಿತು. ಅವರ ನಿರ್ಗಮನ ನಮಗೆಲ್ಲ ತುಂಬಲಾರದ ನಷ್ಟ" ಎಂದು ಅಕ್ಕ ಸಂಸ್ಥೆ ತನ್ನ ಪತ್ರಿಕಾ ಹೇಳಿಕೆಯಲ್ಲಿ ಶೋಕ ವ್ಯಕ್ತಪಡಿಸಿದೆ.
"ಶಿಕಾರಿಪುರ ಹರಿಹರೇಶ್ವರರು ದೇಹಾಂತರಾದ ಸುದ್ದಿ ನಮ್ಮೆಲ್ಲರನ್ನೂ ದಿಗ್ಭ್ರಮೆ ಉಂಟುಮಾಡಿದೆ. ಅವರು ನಮ್ಮ ಹಿರಿಯಣ್ಣನಂತೆ "ನಾವಿಕ" ಸಂಸ್ಥೆಗೆ ಮಾರ್ಗದರ್ಶಕರಾಗಿದ್ದರು. ಅಮೇರಿಕನ್ನಡದ ಮೂಲಕ ಅಮೇರಿಕಾದ ಎಲ್ಲ ಕನ್ನಡಿಗರಿಗೂ ಅತ್ಯಂತ ಪರಿಚಿತರಾಗಿದ್ದರು. ಅವರು ಒಬ್ಬ ಒಳ್ಳೆಯ ಸಾಹಿತಿಯೂ ಅಲ್ಲದೆ ಓರ್ವ ಸಭ್ಯ ನಾಗರಿಕನೂ ಆಗಿದ್ದರು" ಎಂದು ನಾವಿಕ ಪ್ರಕಟಣೆ ತಿಳಿಸಿದೆ.
ಮೈಸೂರು, ಬೆಂಗಳೂರು, ಶಿವಮೊಗ್ಗ, ಹಾಸನ, ತಮಿಳುನಾಡು, ತುಮಕೂರು ಹಾಗೂ ಅಮೆರಿಕಾದ ಮೂಲೆಮೂಲೆಗಳಲ್ಲಿರುವ ಕನ್ನಡಿಗರು ಹರಿ ಅಗಲಿಕೆಗೆ ಕಂಬನಿ ಮಿಡಿದ್ದಾರೆ. ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸುವ ಸಂದೇಶಗಳನ್ನು ದಟ್ಸ್ ಕನ್ನಡ ಮೂಲಕ ರವಾನಿಸುತ್ತಿದ್ದಾರೆ.
ಶ್ರದ್ಧಾಂಜಲಿ ಸಭೆ : ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟದ ಆಶ್ರಯದಲ್ಲಿ ಹರಿಹರೇಶ್ವರ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಇದೇ ಜುಲೈ 30ರಂದು ಶುಕ್ರವಾರ ಏರ್ಪಡಿಸಲಾಗಿದೆ. ಸನ್ನಿವೇಲ್ ನಲ್ಲಿರುವ ಸನಾತನ ಧರ್ಮ ಕೇಂದ್ರದಲ್ಲಿ [ಕೈಫರ್ ರಸ್ತೆ] ನಡೆಯುವ ಈ ಸಭೆಯಲ್ಲಿ ಹರಿ ಅಭಿಮಾನಿಗಳು ಭಾಗವಹಿಸಬಹುದೆಂದು ಕೋರಲಾಗಿದೆ. ಸಮಯ ಸಂಜೆ 6ರಿಂದ 7.30. ಸಭೆಯಲ್ಲಿ ಹರಿ ಅವರನ್ನು ಕುರಿತು ಮಾತನಾಡಲು ಬಯಸುವವರು ಅಲಮೇಲು ಅಯ್ಯಂಗಾರ್ ಅವರಿಗೆ ಮುಂಚಿತವಾಗಿ ತಿಳಿಸಬೇಕೆಂದೂ ಕೋರಲಾಗಿದೆ. E-mail : [email protected] 408-252-2699
ಸಂತಾಪ ಸಂದೇಶಗಳನ್ನು ಇಲ್ಲಿ ಓದಿರಿ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications