ಸೌದಿ : ಹೊಟ್ಟೆಗೆ ಹೊಡೆದ ಮುಸ್ಲಿಂ ಮೌಲ್ವಿಗಳು

ಸೌದಿಯಲ್ಲಿ ಮುಸ್ಲಿಂ ಹೆಣ್ಣುಮಕ್ಕಳನ್ನು ಮಾತ್ರ ಮನೆಗೆಲಸಕ್ಕೆ ನೇಮಕ ಮಾಡಿಕೊಳ್ಳಬೇಕು. ವಿದೇಶಿ ಹೆಣ್ಣುಮಕ್ಕಳನ್ನು ಮನೆಗೆಲಸಕ್ಕೆ ಸೇರಿಸಿಕೊಳ್ಳಬಹುದು. ಆದರೆ, ಅವರು ಮುಸ್ಲಿಮರಾಗಿರಬೇಕು. ಯಾವ ಕಾರಣಕ್ಕೂ ಹಿಂದೂ ಇಲ್ಲವೇ ಕ್ರಿಶ್ಚಿಯನ್ ಮಹಿಳೆಯನ್ನು ಮನೆಗೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದು ಸೌದಿ ಅರೇಬಿಯಾದ ಮುಸ್ಲಿಂ ಮೌಲ್ವಿಗಳ ಮುಖಂಡ ಶೇಖ್ ಯೂಸೆಫ್ ಆಲ್ ಅಹ್ಮದ್ ಹೇಳಿದ್ದಾರೆ ಎಂದು sabq.org ವೆಬ್ ಸೈಟ್ ವರದಿ ಮಾಡಿದೆ.
ಮನೆಗೆಲಸಕ್ಕೆ ಸೇರುವ ವಿದೇಶಿ ಮಹಿಳೆಯರು ಸೌದಿ ಅರೇಬಿಯಾದ ಮುಖ್ಯವಾಗಿ ಇಸ್ಲಾಂ ಧರ್ಮಕ್ಕೆ ಅನುಗುಣವಾಗಿ ಕಾನೂನು ಕಟ್ಟಳೆಯ ಮಿತಿಯೊಳಗೆ ಮನೆಗೆಲಸ ಮಾಡಿಕೊಂಡು ಇರಬೇಕು. ಇದರ ಜೊತೆಗೆ ಮನೆಗೆಲಸಕ್ಕೆ ಸೇರುವ ಮಹಿಳೆಯರು ತಮ್ಮ ರಕ್ಷಣೆಗೆ ಗಂಡ ಅಥವಾ ಪೋಷಕರು ಇರುವುದು ಅವಶ್ಯಕ ಎಂದು ಅಹ್ಮದ್ ಹೇಳಿದ್ದಾರೆ.
ಸೌದಿಯಲ್ಲಿ ದಿನಗೂಲಿಗಳಾಗಿ ಕೆಲಸ ಮಾಡುತ್ತಿರುವ ಕನ್ನಡಿಗರು ಮತ್ತು ಮಲೆಯಾಳಿಗಳಿಗೆ ಮೌಲ್ವಿಗಳು ತೆಗೆದುಕೊಂಡಿರುವ ನಿಲುವು ಚಿಂತೆಗೀಡು ಮಾಡಿದೆ. ದಕ್ಷಿಣ ಕನ್ನಡದಿಂದ ಸಾವಿರಾರು ಕನ್ನಡಿಗರು ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ಸೌದಿಗೆ ತೆರಳಿದ್ದಾರೆ. ಮಹಿಳೆಯರಿಗಿಂತ ಪುರುಷರೆ ಹೆಚ್ಚಾಗಿ ಮನೆಗೆಲಸ ಮಾಡುತ್ತಿದ್ದಾರೆ. ಜೊತೆಗೆ ಕೇರಳದ ಬಹುಭಾಗದ ಜನ ನಂಬಿರುವುದು ಈ ತೈಲ ರಾಷ್ಟ್ರವನ್ನ.
ಕೇರಳದಲ್ಲಿ ಪ್ರತಿ ಮನೆಗೂ ಒಬ್ಬರಂತೆ ಸೌದಿಯಲ್ಲಿ ಕೆಲಸ ಮಾಡಿ ಮರಳಿ ಬಂದವರೆ, ವಿದ್ಯಾಭ್ಯಾಸ ಕಡಿಮೆಯಿದ್ದರೂ ಪರವಾಗಿಲ್ಲ. ಸೌದಿಯಲ್ಲಿ ಕೆಲಸ ಸಿಗಲಿದೆ ಎಂಬ ಮಾತಿದೆ. ಇದೀಗ ಮನೆಗೆಲಸದವರ ತುತ್ತಿಗೆ ಕೈಹಾಕಿರುವ ಮೌಲ್ವಿಗಳು, ನಾಳೆಗೆ ಸೌದಿಯಲ್ಲಿ ಮುಸ್ಲಿಮರಿಗೆ ಮಾತ್ರ ಉದ್ಯೋಗ, ಹಿಂದೂ, ಕ್ರಿಶ್ಚಿಯನ್ನರಿಗೆ ಇಲ್ಲ ಎಂಬ ಸಂದೇಶವನ್ನು ರವಾನಿಸಬಹುದು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications