ಮಹಾತ್ಮಾ ಗಾಂಧೀಜಿ ಕಿವಿ ಕಿತ್ತ ದುರುಳರು

ಮುಂಜಾನೆ 3 ಗಂಟೆ ಸುಮಾರಿಗೆ 15 ಮಂದಿ ಯುವಕರ ಗುಂಪು ಈ ಕೃತ್ಯವೆಸಗಿದ್ದು, ಕೂಡಲೇ ಪೊಲೀಸರು ಕ್ರಮ ಕೈಗೊಂಡು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿ ಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳೆದ ಎರಡು ವರ್ಷಗಳ ಹಿಂದೆ ಇದೇ ಮಹಾತ್ಮಾಗಾಂಧಿಯವರ ಪ್ರತಿಮೆಯಲ್ಲಿದ್ದ ಕನ್ನಡಕವನ್ನು ದುಷ್ಕರ್ಮಿಗಳು ಕಿತ್ತು ಅವಮಾನ ಮಾಡಿದ್ದರು. ಇದನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸಲಾಗಿತ್ತು. ಆಗಾಗ ಇಂತಹ ಘಟನೆಗಳು ನಡೆ ಯುತ್ತಿದ್ದು, ಪೊಲೀಸ್ ಉಪಠಾಣೆ ಯನ್ನು ಇಲ್ಲಿ ಪ್ರಾರಂಭಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳಲಾಗಿತ್ತು.
ಆದರೆ ಕೆಲವು ತಿಂಗಳಿಗ ಳಿಂದ ಪೊಲೀಸ್ ಉಪಠಾಣೆ ಮುಚ್ಚಿದ್ದು, ಯಾರು ಕಾರ್ಯನಿರ್ವ ಹಿಸುತ್ತಿರಲಿಲ್ಲ. ಆದುದರಿಂದಲೇ ಮತ್ತೆ ಇಂತಹ ಘಟನೆ ಮರುಕಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೂಡಲೇ ಇಲ್ಲಿ ಪೊಲೀಸ್ ಉಪಠಾಣೆಯನ್ನು ಪ್ರಾರಂಭಿಸಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ವಿರೂಪಗೊಳಿಸಿ ಅವಮಾನಿಸಿದ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಘಟನಾ ಸ್ಥಳಕ್ಕೆ ಆಗಮಿಸಿದ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ್, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು. ಪ್ರಸ್ತುತ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
ಪ್ರತಿಭಟನೆಯಲ್ಲಿ ಕಟ್ಟೆಗೆಳೆಯರ ಬಳಗದ ಗೋಪಿ, ಪರಮೇಶ್, ಸೋಮು, ಸತೀಶ್ಶೆಟ್ಟಿ, ನಾಗರಾಜ್, ಭಾಸ್ಕರ, ಶಂಕರ್, ರವಿಮೇಸ್ತ್ರಿ, ಪ್ರಕಾಶ್, ಗೋವಿಂದ್ ಮತ್ತಿತರರು ಪಾಲ್ಗೊಂಡಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications