ಸಿರಿವಂತ ದೇವಾಲಯಗಳ ಆಭರಣ ಲೆಕ್ಕ ಆರಂಭ

ಮುಜರಾಯಿ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಸುಮಾರು 34 ಸಾವಿರ ದೇವಾಲಯಗಳಲ್ಲಿರುವ ಚಿನ್ನ ಬೆಳ್ಳಿ ಆಭರಣಗಳ ದಾಖಲೀಕರಣಕ್ಕೆ ಇಲಾಖೆ ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸುತ್ತೋಲೆ ಕಳುಹಿಸಿದ್ದಾರೆ.
ರಾಜಮಹಾರಾಜರ ಕಾಲದಿಂದ ಇರುವ ದೇವಾಲಯಗಳು ರಾಜ್ಯದಲ್ಲಿ ಬಹಳಷ್ಟು ಇವೆ. ಇಂತಹ ದೇವಾಲಗಳಲ್ಲಿ ಭಾರೀ ಪ್ರಮಾಣದ ಆಭರಣಗಳಿದ್ದು ಆದಾಯದ ಆಧಾರದ ಮೇಲೆ ಎ, ಬಿ ಮತ್ತು ಸಿ ಎಂದು ವಿಂಗಡಿಸಲು ಇಲಾಖೆ ನಿರ್ಧರಿಸಿದೆ. ಅಲ್ಲದೆ ಪ್ರತಿ ತಾಲೂಕಿಗೆ ಒಬ್ಬರಂತೆ ಅಕ್ಕಸಾಲಿಗರು ಮತ್ತು ವಿಡಿಯೋಗ್ರಾಫರ್ ನೇಮಿಸಲು ನಿರ್ಧರಿಸಿದ್ದು, ತಹಸಿಲ್ಧಾರ್ ಸಮ್ಮುಖದಲ್ಲಿ ಆಭರಣಗಳ ಲೆಕ್ಕಾಚಾರ ನಡೆಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿನ ದೇವಾಲಯಗಳ ದಾಖಲೀಕರಣ ಮುಗಿಸಿರುವ ಇಲಾಖೆ ಜಿಲ್ಲೆಯಲ್ಲಿ ಸುಮಾರು 18 ಕೋಟಿ ರು. ಮೌಲ್ಯದ ಆಭರಣಗಳಿಗೆ ಎಂದು ವರದಿ ಮಾಡಿದೆ.
ಆದಾಯದ ದೃಷ್ಟಿಯಲ್ಲಿ ರಾಜ್ಯದ ಮೊದಲ ಏಳು ದೇವಾಲಯಗಳ ಪಟ್ಟಿ ಇಂತಿದೆ:
1. ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಾಲಯ.
2. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಮಲೈ ಮಹದೇಶ್ವರ ಸ್ವಾಮಿ ದೇವಾಲಯ.
3. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಕೊಲ್ಲೂರು ಮೂಕಾಂಬಿಕೆ ದೇವಾಲಯ.
4. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ದೇವಾಲಯ.
5. ಮೈಸೂರು ಜಿಲ್ಲೆ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ.
6. ಮಂಡ್ಯ ಜಿಲ್ಲೆ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ.
7. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications