ಸಿರಿವಂತ ದೇವಾಲಯಗಳ ಆಭರಣ ಲೆಕ್ಕ ಆರಂಭ

ಮುಜರಾಯಿ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಸುಮಾರು 34 ಸಾವಿರ ದೇವಾಲಯಗಳಲ್ಲಿರುವ ಚಿನ್ನ ಬೆಳ್ಳಿ ಆಭರಣಗಳ ದಾಖಲೀಕರಣಕ್ಕೆ ಇಲಾಖೆ ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸುತ್ತೋಲೆ ಕಳುಹಿಸಿದ್ದಾರೆ.
ರಾಜಮಹಾರಾಜರ ಕಾಲದಿಂದ ಇರುವ ದೇವಾಲಯಗಳು ರಾಜ್ಯದಲ್ಲಿ ಬಹಳಷ್ಟು ಇವೆ. ಇಂತಹ ದೇವಾಲಗಳಲ್ಲಿ ಭಾರೀ ಪ್ರಮಾಣದ ಆಭರಣಗಳಿದ್ದು ಆದಾಯದ ಆಧಾರದ ಮೇಲೆ ಎ, ಬಿ ಮತ್ತು ಸಿ ಎಂದು ವಿಂಗಡಿಸಲು ಇಲಾಖೆ ನಿರ್ಧರಿಸಿದೆ. ಅಲ್ಲದೆ ಪ್ರತಿ ತಾಲೂಕಿಗೆ ಒಬ್ಬರಂತೆ ಅಕ್ಕಸಾಲಿಗರು ಮತ್ತು ವಿಡಿಯೋಗ್ರಾಫರ್ ನೇಮಿಸಲು ನಿರ್ಧರಿಸಿದ್ದು, ತಹಸಿಲ್ಧಾರ್ ಸಮ್ಮುಖದಲ್ಲಿ ಆಭರಣಗಳ ಲೆಕ್ಕಾಚಾರ ನಡೆಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿನ ದೇವಾಲಯಗಳ ದಾಖಲೀಕರಣ ಮುಗಿಸಿರುವ ಇಲಾಖೆ ಜಿಲ್ಲೆಯಲ್ಲಿ ಸುಮಾರು 18 ಕೋಟಿ ರು. ಮೌಲ್ಯದ ಆಭರಣಗಳಿಗೆ ಎಂದು ವರದಿ ಮಾಡಿದೆ.
ಆದಾಯದ ದೃಷ್ಟಿಯಲ್ಲಿ ರಾಜ್ಯದ ಮೊದಲ ಏಳು ದೇವಾಲಯಗಳ ಪಟ್ಟಿ ಇಂತಿದೆ:
1. ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಾಲಯ.
2. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಮಲೈ ಮಹದೇಶ್ವರ ಸ್ವಾಮಿ ದೇವಾಲಯ.
3. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಕೊಲ್ಲೂರು ಮೂಕಾಂಬಿಕೆ ದೇವಾಲಯ.
4. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ದೇವಾಲಯ.
5. ಮೈಸೂರು ಜಿಲ್ಲೆ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ.
6. ಮಂಡ್ಯ ಜಿಲ್ಲೆ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ.
7. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications