ಅ.18 ರಿಂದ ದತ್ತಮಾಲಾ ಅಭಿಯಾನ: ಮುತಾಲಿಕ್

ಅ.18 ರಂದು ದತ್ತಮಾಲೆ ಧಾರಣೆ ನಡೆಯಲಿದೆ. ಅ.22 ರಂದು ದತ್ತಪೀಠದಲ್ಲಿ ಪೂಜೆ ಸಲ್ಲಿಸಿ ಭಕ್ತರು ಮಾಲೆ ವಿಸರ್ಜನೆ ಮಾಡಲಿದ್ದಾರೆ. 5 ದಿನಗಳ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದತ್ತಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮುತಾಲಿಕ್ ಹೇಳಿದರು.
ದತ್ತಮಾಲೆ ಅಭಿಯಾನ ಮುಕ್ತಾಯ ಕಾರ್ಯಕ್ರಮಕ್ಕೆ ಶ್ರೀರಾಮ ಸೇನೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಂಪತ್ ಮತ್ತ್ತು ಕಾರ್ಯಕಾರಿ ಸದಸ್ಯ ಸಮೀರ್ ದಾರೇಕರ್ ಭಾಗವಹಿಸಲಿದ್ದಾರೆ ಎಂದು ಮುತಾಲಿಕ್ ತಿಳಿಸಿದರು.












Click it and Unblock the Notifications