ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.18 ರಿಂದ ದತ್ತಮಾಲಾ ಅಭಿಯಾನ: ಮುತಾಲಿಕ್

By Mahesh
|
Google Oneindia Kannada News

Datta Mala Aabhiyan, Mutalik
ಚಿಕ್ಕಮಗಳೂರು, ಆ.2: ಅಕ್ಟೋಬರ್ 18 ರಿಂದ 22 ರವರೆಗೆ ದತ್ತಮಾಲಾ ಅಭಿಯಾನ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುದ್ದಿಗಾರರಿಗೆ ತಿಳಿಸಿದರು.

ಅ.18 ರಂದು ದತ್ತಮಾಲೆ ಧಾರಣೆ ನಡೆಯಲಿದೆ. ಅ.22 ರಂದು ದತ್ತಪೀಠದಲ್ಲಿ ಪೂಜೆ ಸಲ್ಲಿಸಿ ಭಕ್ತರು ಮಾಲೆ ವಿಸರ್ಜನೆ ಮಾಡಲಿದ್ದಾರೆ. 5 ದಿನಗಳ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದತ್ತಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮುತಾಲಿಕ್ ಹೇಳಿದರು.

ದತ್ತಮಾಲೆ ಅಭಿಯಾನ ಮುಕ್ತಾಯ ಕಾರ್ಯಕ್ರಮಕ್ಕೆ ಶ್ರೀರಾಮ ಸೇನೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಂಪತ್ ಮತ್ತ್ತು ಕಾರ್ಯಕಾರಿ ಸದಸ್ಯ ಸಮೀರ್ ದಾರೇಕರ್ ಭಾಗವಹಿಸಲಿದ್ದಾರೆ ಎಂದು ಮುತಾಲಿಕ್ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X