ಸರಕಾರಿ ಬಸ್ಸುಗಳ ಮೇಲೆ ಕನ್ನಡದ ತೇರು

ಸುಚಿತ್ರ ಕಲಾಕೇಂದ್ರದ ಸಹಯೋಗದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕನ್ನಡ ಚಿಂತನೆ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಮಾಡಿದ ಸಲಹೆಗೆ ಸಚಿವ ಅಶೋಕ್ ಸಮ್ಮತಿಸಿದರು. ಕನ್ನಡಕ್ಕಾಗಿ ದುಡಿದು ಹಿರಿಯ ಚೇತನಗಳ ಭಾವಚಿತ್ರಗಳನ್ನು ಬಸ್ಸುಗಳ ಮೇಲೆ ಬರೆಸುವುದಾಗಿ ಅವರು ಹೇಳಿದರು.
ಇಂಗ್ಲಿಷ್ ವ್ಯಾಮೋಹ ಕನ್ನಡಕ್ಕೆ ಕುತ್ತು
ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿದರೆ ಮಾತ್ರ ನಮ್ಮ ಉಳಿವು ಸಾಧ್ಯ ಎಂದು ಸಾರಿಗೆ ಸಚಿವ ಅಶೋಕ್ ಹೇಳಿದ್ದಾರೆ.
ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ ಏರ್ಪಡಿಸಿದ್ದ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾಷೆ ಸಂಸ್ಕೃತಿ ಮರೆತರೆ ನಮಗೆ ಉಳಿಗಾಲವಿಲ್ಲ ಎಂದರು. ರಾಜ್ಯದಲ್ಲಿ ಕನ್ನಡಕ್ಕೆ ಆಧ್ಯತೆ ಸಿಗಬೇಕು. ದೈನಂದಿನ ಜೀವನದಲ್ಲಿ, ಆಡಳಿತದಲ್ಲಿ ಕನ್ನಡ ಬಳಕೆಯಾಗಬೇಕು. ಇದರ ಜೊತೆಗೆ ಬದಲಾದ ಸನ್ನಿವೇಶದಲ್ಲಿ ಗಣಕಯಂತ್ರದ ಮೂಲಕವೂ ಕನ್ನಡ ಪರಿಪೂರ್ಣವಾಗಿ ಬಳಸುವಂತಾಗಬೇಕು. ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಸಾಕಷ್ಟು ಕಾರ್ಯಕ್ರಮ ರೂಪಿಸಿವೆ ಎಂದರು.
ಇಂಗ್ಲಿಷ್ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಎಂಬ ವರ್ಗೀಕರಣವೇ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ವಿರುದ್ಧವಾದುದು. 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ದೊರೆಯುಂತಾಗಬೇಕು. ಅಗತ್ಯಕ್ಕೆ ತಕ್ಕಷ್ಟು ಬೇರೆ ಭಾಷೆಯನ್ನು ಕಲಿಯಬೇಕು. ಆದರೆ, ಜಾಗತೀಕರಣದಿಂದ ಇಂಗ್ಲಿಷ್ ಅತ್ಯಹತ್ಯ ಭಾಷೆಯಾಗಿ ಮಾರ್ಪಟ್ಟಿದೆ. ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಕನ್ನಡ ನಲುಗುವಂತಾಗಿದೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications