ಮಾನವ ಕಳ್ಳಸಾಗಣೆಯಲ್ಲಿ ರಾಜ್ಯ ನಂ-1?

ರಾಜ್ಯದಲ್ಲಿ ಮಾನವ ಕಳ್ಳಸಾಗಣೆ ದಂಧೆಯಲ್ಲಿ ತೊಡಗಿರುವ ಸಮಾಜಘಾತಕರು ತಿಂಗಳಿಗೆ 25 ಕೋಟಿ ರುಪಾಯಿ ವಹಿವಾಟು ನಡೆಸುತ್ತಿದ್ದಾರೆ. ಆಂಧ್ರಕ್ಕೆ ಹೋಲಿಸಿದರೆ ಇದು ಶೇಕಡಾ 5 ರಷ್ಟು ಹೆಚ್ಚು ಎಂದು ರಾಜ್ಯ ಪೊಲೀಸ್ ಇಲಾಖೆ ಸಿದ್ಧಪಡಿಸಿರುವ ವರದಿಯಿಂದ ಬಹಿರಂಗಗೊಂಡಿದೆ. ಒಂದು ವರ್ಷದಿಂದೀಚೆಗೆ ರಾಜ್ಯದಲ್ಲಿ ಮಾನವ ಕಳ್ಳಸಾಗಣೆ ಹೆಚ್ಚಾಗಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ 2012ರ ವೇಳೆಗೆ ಆಂಧ್ರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಹಾಗೂ ಮಕ್ಕಳು ಬಲಿಯಾಗಲಿದ್ದಾರೆ.
ಅಮಾಯಕ ಮಹಿಳೆ ಮತ್ತು ಮಕ್ಕಳ ಬಡತನವನ್ನು ಬಂಡವಾಳವಾಗಿಸಿಕೊಂಡು ದಂಧೆಕೋರರು ಅವರ ಪೋಷಕರಿಗೆ ಉದ್ಯೋಗ, ಹಣ ಹಾಗೂ ದಿಢೀರ್ ಶ್ರೀಮಂತಿಕೆಯ ಆಮಿಷ ತೋರಿಸಿ ಹೊರರಾಜ್ಯ ಮತ್ತು ಹೊರದೇಶಗಳಿಗೆ ಸಾಗಿಸಿ ವೇಶ್ಯಾವಾಟಿಕೆ, ಭಿಕ್ಷಾಟನೆ ಹಾಗೂ ಕೂಲಿ ಕೆಲಸಕ್ಕೆ ನೂಕಿ ಕೋಟ್ಯಂತರ ರುಪಾಯಿ ಹಣ ಗಳಿಸುತ್ತಿದ್ದಾರೆ ಎನ್ನುವ ಅಂಶ ಹೊರಬಿದ್ದಿದೆ.
ಕಳೆದ 5 ವರ್ಷಗಳಲ್ಲಿ ಸುಮಾರು 3.6 ಲಕ್ಷ ಮಹಿಳೆಯರು, ಮಕ್ಕಳು ನಾಪತ್ತೆಯಾಗಿದ್ದಾರೆ. ಬೆಳಗಾವಿ, ಬಿಜಾಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗುಲ್ಬರ್ಗಾ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಅತಿ ಹೆಚ್ಚು ಯುವತಿಯರು ಹಾಗೂ ಮಕ್ಕಳು ಪ್ರತಿ ತಿಂಗಳು ಕಣ್ಮರೆಯಾಗುತ್ತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications