ಸಂಪರ್ಕ ಕೊಂಡಿ ನೆಲಮಂಗಲ ಏಕ್ಸ್ ಪ್ರೆಸ್ ವೇ ರೆಡಿ...

ವಿಪರೀತ ಟ್ರಾಫಿಕ್ ಜಾಮ್ ಪೆಡಂಭೂತವನ್ನು ತೊಲಗಿಸಿ ನೆಲಮಂಗಲಕ್ಕೆ 17 ನಿಮಿಷ ಮತ್ತು ತುಮಕೂರಿಗೆ 45 ನಿಮಿಷದಲ್ಲಿ ಹೋಗಬಹುದಾದ ಈ ಎಕ್ಷ್ ಪ್ರೆಸ್ ವೇ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿರ್ಮಾಣಗೊಂಡಿದೆ. 2007 ಮೇ ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಖಾಸಗಿ ಸಹಭಾಗಿತ್ವದಲ್ಲಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಅದೇ ವರ್ಷ ನವೆಂಬರ್ ತಿಂಗಳಲ್ಲಿ ಕಾಮಗಾರಿ ಆರಂಭಿಸಿದ ಪ್ರಾಧಿಕಾರ ಹೆಚ್ಚುಕಮ್ಮಿ ಒಂದು ವರ್ಷ ತಡವಾಗಿ ಕಾಮಗಾರಿ ಪೂರ್ಣಗೊಳಿಸಿದೆ.
ಹೆದ್ದಾರಿ ಪ್ರಾಧಿಕಾರದ ಮೂಲಗಳ ಪ್ರಕಾರ, ರಸ್ತೆ ನಿರ್ಮಾಣ, ಅಂಡರ್ ಪಾಸ್ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿದ್ದು ಸಣ್ಣ ಪುಟ್ಟ ಕಾಮಗಾರಿಗಳು 15 ದಿನಗಳಲ್ಲಿ ಪೂರ್ಣಗೊಂಡು ಇದೇ ತಿಂಗಳು ಸಂಚಾರಕ್ಕೆ ಮುಕ್ತವಾಗಲಿದೆ. ಸೋಡೆಕುಪ್ಪ ರಸ್ತೆ, ಅರಶಿನಕುಂಟೆ, ದಾಸನಾಪುರ, ಅಡಕಮಾರನಹಳ್ಳಿ, ಮಾದಾಪುರ ಮತ್ತು ಚಿಕ್ಕಬಿದರಕಲ್ಲು ಬಳಿ ಮಿನಿ ಫ್ಲೈ ಓವರ್ ಗಳು ನಿರ್ಮಾಣಗೊಂಡಿದೆ.
ಸುಮಾರು 776 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎಕ್ಷ್ ಪ್ರೆಸ್ ವೇಗೆ 121 ಪಿಲ್ಲರ್ ಅಳವಡಿಸಲಾಗಿದೆ. ಆರು ವಾಹನ ಸಬ್ ವೇ ಗಳು ಸಿಗ್ನಲ್ ಫ್ರೀ ರಸ್ತೆಯಾಗಲಿದೆ. ಆಟೋರಿಕ್ಷಾ, ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನಗಳಿಗೆ ಪ್ರವೇಶ ನಿಷಿದ್ದ ಸಾಧ್ಯತೆಯಿದೆ. ಬೆಂಗಳೂರು ಕಡೆಯಿಂದ ಕೆನ್ನಮೆಟಲ್ ಕಂಪನಿ ಬಳಿ ಮತ್ತು ತುಮಕೂರು ಕಡೆಯಿಂದ ನೆಲಮಂಗಲದ ಬಳಿ ಶುಲ್ಕ ವಸೂಲಿಗೆ ಟೋಲ್ ಪ್ಲಾಜಾ ಸಜ್ಜಾಗಿದೆ.
ಮಡಿವಾಳ ಬೈಪಾಸ್ ಶೀಘ್ರ ರೆಡಿ : ಮಡಿವಾಳದ ಅಯ್ಯಪ್ಪ ದೇವಸ್ಥಾನದಿಂದ ಸೇಂಟ್ ಜಾನ್ ಆಸ್ಪತ್ರೆವರೆಗಿನ ಅಂಡರ್ ಪಾಸ್ ಕಾಮಗಾರಿಯೂ ಪೂರ್ಣಗೊಂಡಿದ್ದು, ಸೋಮವಾರದಿಂದ(ಆಗಸ್ಟ್ 2) ಪ್ರಾಯೋಗಿಕವಾಗಿ ಮಡಿವಾಳ ಅಂಡರ್ ಪಾಸ್ ನ್ನು ಸಾರ್ವಜನಿಕ ಸೇವೆಗೆ ನೀಡಲಾಗಿದೆ. ಇದರಿಂದ ಸೇಂಟ್ ಜಾನ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯ ವಾಹನ ದಟ್ಟಣೆ ಕೊಂಚ ಕಡಿಮೆಯಾಗಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications