ಗಣಿ ಮಸೂದೆಯ ಕರಡು ತಿದ್ದುತ್ತಿರುವ ಸರ್ಕಾರ

ಸಿದ್ದಪಡಿಸಿದ ಕರಡನ್ನು ಲೋಕಸಭೆಯಲ್ಲಿ ಮಂಡಿಸುವದಕ್ಕೂ ಮೊದಲು ಉನ್ನತಾಧಿಕಾರದ ಸಚಿವರ ಸಮಿತಿಗೆ ಅನುಮೋದನೆಗಾಗಿ ಸಲ್ಲಿಸಲಾಗುವುದು. ಆದರೆ ಲಾಭದ ಶೇ.26 ರಷ್ಟನ್ನು ಸ್ಥಳಿಯರಿಗೆ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ದಿಗೆ ನೀಡುವುದಕ್ಕೆ ಉದ್ಯಮಿಗಳು ಹಾಗೂ ಫಿಕ್ಕಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈಗಿನ ಲೋಕಸಭಾ ಅಧಿವೇಶನದಲ್ಲಿ ಮಸೂದೆಯನ್ನು ಮಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ಗಣಿ ಕಾರ್ಯದರ್ಶಿ ವಿಜಯ್ ಕುಮಾರ್ ತಿಳಿಸಿದ್ದಾರೆ ಹೊಸ ಗಣಿ ಕಾಯ್ದೆ 1957ರ ಗಣಿ ಕಾಯ್ದೆಯನ್ನು ರದ್ದುಪಡಿಸಲಿದೆ.
ಕಳೆದ ಜುಲೈ 20 ಹಾಗೂ ಜುಲೈ 30ರಂದು ಸಭೆ ಸೇರಿದ್ದ ಉನ್ನತಾಧಿಕಾರದ ಸಚಿವರ ಸಮಿತಿ ಹಿಂದಿನ ಕರಡನ್ನು ಪರಿಶೀಲಿಸಿದ್ದು, ಶೇ.26 ರಷ್ಟು ಲಾಭಾಂಶವನ್ನು ಭೂ ಮಾಲೀಕರಿಗೆ, ಮತ್ತು ತೊಂದರೇಗೀಡಾದ ಕುಟುಂಬಗಳಿಗೆ ನೀಡಬೇಕೆಂದು ನಿರ್ಧರಿಸಿತ್ತು.
ಈಗ ಅಂತಿಮ ಕರಡನ್ನು ಸಿದ್ದಪಡಿಸಲಾಗುತ್ತಿದ್ದು ಲಾಭಾಂಶದ ಹಂಚಿಕೆಯ ಕುರಿತು ಅಂತಿಮ ನಿರ್ದಾರ ಕೈಗೊಳ್ಳಲಿದೆ. ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅದ್ಯಕ್ಷತೆಯ ಉನ್ನತಾಧಿಕಾರದ ಸಮಿತಿಯಲ್ಲಿ ಗೃಹ ಸಚಿವ ಪಿ ಚಿದಂಬರಂ, ಉಕ್ಕು ಸಚಿವ ವೀರಭದ್ರ ಸಿಂಗ್, ಕಾನೂನು ಸಚಿವ ವೀರಪ್ಪ ಮೊಯ್ಲಿ, ಗಣಿ ಸಚಿವ ಬಿಕೆ ಹಂಡಿಕ್, ವಾಣಿಜ್ಯ ಸಚಿವ ಆನಂದ್ ಶರ್ಮ, ಬುಡಕಟ್ಟು ವ್ಯವಹಾರಗಳ ಸಚಿವ ಕೆ ಭುರಿಯಾ, ಕಲ್ಲಿದ್ದಲು ಸಚಿವ ಪ್ರಕಾಶ್ ಜೈಸ್ವಾಲ್ , ಪರಿಸರ ಸಚಿವ ಜೈ ರಾಮ್ ರಮೇಶ್, ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಇದ್ದಾರೆ. ಮುಂದಿನ ಸಭೆಯ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications