ಗಣಿ ಮಸೂದೆಯ ಕರಡು ತಿದ್ದುತ್ತಿರುವ ಸರ್ಕಾರ

ಸಿದ್ದಪಡಿಸಿದ ಕರಡನ್ನು ಲೋಕಸಭೆಯಲ್ಲಿ ಮಂಡಿಸುವದಕ್ಕೂ ಮೊದಲು ಉನ್ನತಾಧಿಕಾರದ ಸಚಿವರ ಸಮಿತಿಗೆ ಅನುಮೋದನೆಗಾಗಿ ಸಲ್ಲಿಸಲಾಗುವುದು. ಆದರೆ ಲಾಭದ ಶೇ.26 ರಷ್ಟನ್ನು ಸ್ಥಳಿಯರಿಗೆ ಮತ್ತು ಬುಡಕಟ್ಟು ಜನಾಂಗದ ಅಭಿವೃದ್ದಿಗೆ ನೀಡುವುದಕ್ಕೆ ಉದ್ಯಮಿಗಳು ಹಾಗೂ ಫಿಕ್ಕಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈಗಿನ ಲೋಕಸಭಾ ಅಧಿವೇಶನದಲ್ಲಿ ಮಸೂದೆಯನ್ನು ಮಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ಗಣಿ ಕಾರ್ಯದರ್ಶಿ ವಿಜಯ್ ಕುಮಾರ್ ತಿಳಿಸಿದ್ದಾರೆ ಹೊಸ ಗಣಿ ಕಾಯ್ದೆ 1957ರ ಗಣಿ ಕಾಯ್ದೆಯನ್ನು ರದ್ದುಪಡಿಸಲಿದೆ.
ಕಳೆದ ಜುಲೈ 20 ಹಾಗೂ ಜುಲೈ 30ರಂದು ಸಭೆ ಸೇರಿದ್ದ ಉನ್ನತಾಧಿಕಾರದ ಸಚಿವರ ಸಮಿತಿ ಹಿಂದಿನ ಕರಡನ್ನು ಪರಿಶೀಲಿಸಿದ್ದು, ಶೇ.26 ರಷ್ಟು ಲಾಭಾಂಶವನ್ನು ಭೂ ಮಾಲೀಕರಿಗೆ, ಮತ್ತು ತೊಂದರೇಗೀಡಾದ ಕುಟುಂಬಗಳಿಗೆ ನೀಡಬೇಕೆಂದು ನಿರ್ಧರಿಸಿತ್ತು.
ಈಗ ಅಂತಿಮ ಕರಡನ್ನು ಸಿದ್ದಪಡಿಸಲಾಗುತ್ತಿದ್ದು ಲಾಭಾಂಶದ ಹಂಚಿಕೆಯ ಕುರಿತು ಅಂತಿಮ ನಿರ್ದಾರ ಕೈಗೊಳ್ಳಲಿದೆ. ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅದ್ಯಕ್ಷತೆಯ ಉನ್ನತಾಧಿಕಾರದ ಸಮಿತಿಯಲ್ಲಿ ಗೃಹ ಸಚಿವ ಪಿ ಚಿದಂಬರಂ, ಉಕ್ಕು ಸಚಿವ ವೀರಭದ್ರ ಸಿಂಗ್, ಕಾನೂನು ಸಚಿವ ವೀರಪ್ಪ ಮೊಯ್ಲಿ, ಗಣಿ ಸಚಿವ ಬಿಕೆ ಹಂಡಿಕ್, ವಾಣಿಜ್ಯ ಸಚಿವ ಆನಂದ್ ಶರ್ಮ, ಬುಡಕಟ್ಟು ವ್ಯವಹಾರಗಳ ಸಚಿವ ಕೆ ಭುರಿಯಾ, ಕಲ್ಲಿದ್ದಲು ಸಚಿವ ಪ್ರಕಾಶ್ ಜೈಸ್ವಾಲ್ , ಪರಿಸರ ಸಚಿವ ಜೈ ರಾಮ್ ರಮೇಶ್, ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಇದ್ದಾರೆ. ಮುಂದಿನ ಸಭೆಯ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications