ಪ್ರಾಣಕ್ಕೆ ಎರವಾದ ಹಾವುಗಳ ಮಿಲನ

ಚಿಕ್ಕನಹಳ್ಳಿ ಬಡಾವಣೆಯ ಗೋಣೆಪ್ಪ (40) ಆತ್ಮಹತ್ಯೆ ಮಂಗಳವಾರ ಮಾಡಿಕೊಂಡಿದ್ದಾರೆ. ಮೃತರ ತಂಗಿ ಲಕ್ಷ್ಮಮ್ಮ ಅವರ ವಿವಾಹ ಮೂರು ವರ್ಷದ ಹಿಂದೆ ಹರಪನಹಳ್ಳಿಯ ಯುವಕನ ಜತೆ ನಡೆದಿತ್ತು. ಆಕೆ ಬೆಳಗ್ಗೆ ಹೊಲಕ್ಕೆ ಹೋಗಿದ್ದಾಗ ನಾಗರಹಾವುಗಳು ಪ್ರಣಯದಲ್ಲಿ ತೊಡಗಿಕೊಂಡಿದ್ದ ದೃಶ್ಯ ನೋಡಿದ್ದರು.
ಇದರ ದೋಷ ನಿವಾರಣೆಗೆಂದು ಸಂಬಂಧಿಕರಿಗೆ ಕೆಟ್ಟ ಸುದ್ದಿ ಕಳುಹಿಸಬೇಕೆಂಬ ಹಿನ್ನೆಲೆಯಲ್ಲಿ ಗೋಣೆಪ್ಪನ ಪಕ್ಕದ ಮನೆಗೆ ಈಕೆ ಸತ್ತಿರುವುದಾಗಿ ದೂರವಾಣಿ ಮೂಲಕ ಸುದ್ದಿ ತಿಳಿಸಲಾಗಿತ್ತು. ಪೂರ್ಣ ವಿಷಯ ತಿಳಿಯುವುದಾಗಿ ಗೋಣೆಪ್ಪ ಅವರ ಹೆಂಡತಿ ನೀಲಮ್ಮ ಪಕ್ಕದ ಮನೆಗೆ ಹೋಗಿದ್ದರು.
ವಿವರವನ್ನು ಗಂಡನಿಗೆ ತಿಳಿಸಲು ಮನೆಗೆ ಬರುವಷ್ಟರಲ್ಲಿ ಅನಾಹುತ ನಡೆದು ಹೋಗಿತ್ತು. ತಂಗಿಯ ಸಾವಿನ ಸುದ್ದಿ ಅರಗಿಸಿಕೊಳ್ಳಲು ಆಗದೆ ಗೋಣೆಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications