ವಿಚ್ಛೇದನ : ಚೇತನ್ ಗೆ ಟಾಟಾ ಹೇಳಿದ ಜ್ವಾಲಾ

ಹೌದು ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ನಿಜ. ಆದರೆ, ನಾನು ವಿವಾಹ ಬಂಧನದಿಂದ ಬೇರ್ಪಡಲು ಇತ್ತೀಚೆಗೆ ಹಬ್ಬಿರುವ ಗಾಳಿ ಸುದ್ದಿಯಿಂದಲ್ಲ. ಕ್ರಿಕೆಟಿಗ ಅಜರುದ್ದೀನ್ ಮತ್ತು ತಮ್ಮ ಮಧ್ಯೆ ಯಾವುದೇ ಸಂಬಂಧವಿಲ್ಲ. ನಾವಿಬ್ಬರು ಸ್ನೇಹಿತರು ಮಾತ್ರ ಎಂದು ಗುಟ್ಟಾ ಮೌನ ಮುರಿದಿದ್ದಾಳೆ.
ಅಜರುದ್ದೀನ್ ಮತ್ತು ನನ್ನ ಮಧ್ಯೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿರುವ ಎಲ್ಲ ಸುದ್ದಿಗಳು ಶುದ್ಧ ಸುಳ್ಳು. ಆ ಬಗ್ಗೆ ನಾನು ಏನನ್ನೂ ಹೇಳಲಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ. ಜೊತೆಗೆ ನನ್ನ ಜೀವನದಲ್ಲಿ ಅಲ್ಲೋಕಲ್ಲೋಲ ಉಂಟಾಗಿದೆ ಎಂದು ಜ್ವಾಲಾ ಹೇಳಿದ್ದಾರೆ. ಬ್ಯಾಡ್ಮಿಂಟನ್ ಪಟು ಚೇತನ್ ಆನಂದ ಅವರಿಗೆ ವಿಚ್ಛೇದನ ನೀಡುವ ಕಾರಣವನ್ನು ನಂತರ ಮಾಧ್ಯಮಗಳಿಗೆ ವಿವರಿಸುವುದಾಗಿ ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಮೊರಾದಾಬಾದ್ ನ ಕಾಂಗ್ರೆಸ್ ಸಂಸದ ಆಗಿರುವ ಮೊಹಮ್ಮದ್ ಅಜರುದ್ದೀನ್ ಮತ್ತು ಬಾಲಿವುಡ್ ನಟಿ ಹಾಗೂ ಸಲ್ಮಾನ್ ಖಾನ್ ಅವರ ಮಾಜಿ ಗೆಳತಿ ಸಂಗೀತಾ ಬಿಜಲಾನಿ ಅವರ 14 ವರ್ಷಗಳ ವೈವಾಹಿಕ ಜೀವನ ಅಂತ್ಯ ಕಾಣುವ ಸಾಧ್ಯತೆಗಳಿವೆ ಎಂದು ಮಿಡ್ ವೇ ವರದಿ ಮಾಡಿತ್ತು. 47ರ ಹರೆಯದ ಅಜರುದ್ದೀನ್ ಅವರು ಶೀಘ್ರದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಸಿದ್ದತೆಯಲ್ಲಿದ್ದಾರೆ.
26 ವರ್ಷದ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರೊಂದಿಗೆ ಅಜರುದ್ಧೀನ್ ಡೇಟಿಂಗ್ ನಡೆಸುತ್ತಿರುವುದು ಗುಟ್ಟಾಗೇನೂ ಉಳಿದಿಲ್ಲ. ಅಜರುದ್ದೀನ್ ಹೈದರಾಬಾದ್ ನಲ್ಲಿದ್ದರೆ, ಪುಲ್ಲೇಲು ಗೋಪಿಚಂದ್ ಅವರ ತರಬೇತಿ ಬಳಿ ಠಿಕಾಣಿ ಹೂಡುತ್ತಾರೆ ಎಂಬ ಗುಲ್ಲು ದೇಶದ ತುಂಬೆಲ್ಲಾ ಹರಿದಾಡಿತ್ತು. ತರಬೇತಿ ಕೇಂದ್ರದಲ್ಲಿ ಜ್ವಾಲಾ ಗುಟ್ಟಾ ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications