ಊಟ ತಿಂಡಿಗಾಗಿ ಕಾಂಗ್ರೆಸ್ಸಿಗರ ಪಾದಯಾತ್ರೆ : ರೆಡ್ಡಿ

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಎಲ್ಲರೂ ಕಾಂಗ್ರೆಸ್ನವರೇ. ಬಿಜೆಪಿಯ ಯಾರೂ ಅಕ್ರಮ ಗಣಿಗಾರಿಕೆ ಮಾಡುತ್ತಿಲ್ಲ. ಲೋಕಾಯುಕ್ತರಿಂದ ತನಿಖೆ ಸಂಪೂರ್ಣವಾಗಿ ನಡೆದಲ್ಲಿ ಕಾಂಗ್ರೆಸ್ ನ ಸಂತೋಷ್ ಲಾಡ್, ಎಚ್ಆರ್ ಗವಿಯಪ್ಪ ಮುಂತಾದವರು ಜೈಲಿಗೆ ಹೋಗುವುದು ಶತಸಿದ್ಧ ಎಂದು ಜನಾರ್ದನ ರೆಡ್ಡಿ ಗುಡುಗಿದ್ದಾರೆ.
ಸಂಡೂರುನ ಎಪಿಎಂಸಿ ಆವರಣದಲ್ಲಿ ಶನಿವಾರ ನಡೆದ ಜಿಲ್ಲಾ ಬಿಜೆಪಿಯ ಸ್ವಾಭಿಮಾನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಜನಾರ್ದನ ರೆಡ್ಡಿ, ಕಾಂಗ್ರೆಸ್ಸಿಗರಿಗೆ ನನ್ನನ್ನು ಕಂಡರೆ ಭಯ, ಅದಕ್ಕೇ ಅವರು ನನ್ನ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.
ಶಾಸಕ ಸಂತೋಷ್ ಲಾಡ್ ವಂಚನೆ ಪ್ರಕರಣದಲ್ಲಿ ವಿಮಾನ ನಿಲ್ದಾಣದಲ್ಲಿಯೇ ಬಂಧನಕ್ಕೆ ಒಳಪಟ್ಟಿದ್ದ. ಈಗ, ಗಣಿ ಹಗರಣದ ತನಿಖೆ ನಡೆದಲ್ಲಿ ಎಲ್ಲಿ ಬಂಧಿತನಾಗುತ್ತೇನೋ ಎಂಬ ಭಯದಿಂದ ಸಿದ್ಧರಾಮಯ್ಯನ ಜೊತೆ ಪಾದಯಾತ್ರೆ ಮಾಡುತ್ತಿದ್ದಾನೆ. ಸಂತೋಷ್ ಲಾಡ್ನೇ ಮಹಾ ವಂಚಕ. ಇಂಥವನ ಜೊತೆ ಸಿದ್ಧರಾಮಯ್ಯ ಬರುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ರೆಡ್ಡಿ ಟೀಕಿಸಿದರು.
ಊಟ ತಿಂಡಿಗಾಗಿ ಪಾದಯಾತ್ರೆ : ನಿತ್ಯ ಊಟ, ತಿಂಡಿ ಸಿಗುವ ನೆಪದಲ್ಲಿ ಕಾಂಗ್ರೆಸ್ಸಿಗರು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಹಂಗಿಸಿದ ರೆಡ್ಡಿ, 60 ವರ್ಷಗಳ ಕಾಲ ಜಿಲ್ಲೆಯ ಅಭಿವೃದ್ಧಿಯನ್ನು ಮಾಡದ ಕಾಂಗ್ರೆಸ್ಸಿಗರು ನಾವು ಮಾಡುತ್ತಿರುವ ಅಭಿವೃದ್ಧಿಯನ್ನು ಸಹಿಸದೇ ಹೊಟ್ಟೆಕಿಚ್ಚುಪಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯ ಸ್ವಾಭಿಮಾನಕ್ಕೆ, ಜಿಲ್ಲೆಯ ಜನರ ಗೌರವಕ್ಕೆ ಧಕ್ಕೆ ಉಂಟಾದರೆ ನಾನು ಸಹಿಸುವುದಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಲಿಕ್ಕಾಗಿ ಕಾಂಗ್ರೆಸ್ನವರು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಜಿ. ಸೋಮಶೇಖರರೆಡ್ಡಿ, ಸುರೇಶ್ಬಾಬು, ಎಂ.ಎಸ್. ಸೋಮಲಿಂಗಪ್ಪ, ಬಿ. ನಾಗೇಂದ್ರ, ಮೃತ್ಯುಂಜಯ ಜಿನಗಾ ಮತ್ತಿತರರು ಹಾಜರಿದ್ದರು.
ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಳ್ಳಾರಿಯನ್ನು ತಲುಪುತ್ತಿರುವುದರಿಂದ ಬಳ್ಳಾರಿ ನೆಲ ಮತ್ತಷ್ಟು ಕಾವು ಪಡೆಯುತ್ತಿದೆ. ಈ ನಡುವೆ ಕಪ್ಪಡರಿದ ಮೋಡಗಳು ಕೂಡ ಕಾದ ವಾತಾವರಣವನ್ನು ತಂಪಾಗಿಸಲು ಆಗಾಗ ಮಳೆ ಸುರಿಸುತ್ತಿವೆ.
ನಿಮ್ಮ ಮೊಬೈಲಿನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ!
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications