ಖೇಹರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
ಬೆಂಗಳೂರು,
ಆ. 8 : ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಜಗದೀಶ್ ಸಿಂಗ್ ಖೇಹರ್ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರು ನ್ಯಾಯಮೂರ್ತಿ ಖೇಹರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. id="toptextpromo">ಬೆಳಗ್ಗೆ
10 ಗಂಟೆಗೆ ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು, ಮುಖ್ಯ ಕಾರ್ಯದರ್ಶಿ ರಂಗನಾಥ್ ಮತ್ತಿತರು ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನೇಮಕವಾಗಿರುವುದು ಸಂತೋಷವಾಗಿದೆ. ಕರ್ನಾಟಕ ಸುಂದರ ರಾಜ್ಯ, ಈ ರಾಜ್ಯದಲ್ಲಿ ಸೇವೆ ಸಲ್ಲಿಸುವುದು ಸಂಭ್ರಮದ ವಿಚಾರ ಎಂದು ಖೇಹರ್ ಹೇಳಿದರು. id='are-slot-1' class='oiad oi-axt oiadv'> id='top-searched-articles'>ರಾಜ್ಯ
ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಪಿ ಡಿ ದಿನಕರನ್ ಅವರು ಸಿಕ್ಕಿಂಗೆ ವರ್ಗಾವಣೆಗೊಂಡ ನಂತರ ಉತ್ತರಖಂಡ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿತ್ತು. ಶನಿವಾರ ಬೆಂಗಳೂರಿಗೆ ಆಗಮಿಸಿದ್ದ ನ್ಯಾ. ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರೊಂದಿಗೆ ಸೌಹಾರ್ದ ಮಾತುಕತೆ ನಡೆಸಿದ್ದರು.











Click it and Unblock the Notifications